ರಾಜ್ಯ

ರಾಜ್ಯದಲ್ಲಿ ಇಂದು 240 ಜನರಿಗೆ ಕೊರೋನಾ ಸೋಂಕು ದೃಢ; ಓರ್ವ ಸಾವು

0

ಬೆಂಗಳೂರು : ಇಂದು ಕೂಡ ಕೋವಿಡ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಓರ್ವ ಸೋಂಕಿಗೆ ಬಲಿಯಾಗಿದ್ದಾರೆ

ಈ ಕುರಿತಂತೆ ಇಂದು ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ RTPCR ಮೂಲಕ 6223 ಹಾಗೂ RAT ಮೂಲಕ 792 ಸೇರಿದಂತೆ 7015 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದೆ.

ಎಲ್ಲಿ ? ಎಷ್ಟು?

Advertisement. Scroll to continue reading.

ಕಳೆದ 24 ಗಂಟೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಂತ 7015 ಜನರಲ್ಲಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ, ಬಳ್ಳಾರಿ 03, ಬೆಂಗಳೂರು ಗ್ರಾಮಾಂತರ 06, ಬೆಂಗಳೂರು ನಗರ 124, ಚಾಮರಾಜನಗರ 04, ಚಿಕ್ಕ ಬಳ್ಳಾಪುರ 05, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ತಲಾ 6, ದಕ್ಷಿಣ ಕನ್ನಡ, ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ತಲಾ ಇಬ್ಬರು, ಮೈಸೂರು 19 ಮಂದಿಗೆ ಕೋವಿಡ್ ದೃಢಪಟ್ಟಿದೆ ಎಂದಿದೆ.

ತುಮಕೂರು 21, ಶಿವಮೊಗ್ಗ 11, ಮಂಡ್ಯ 09, ಉತ್ತರ ಕನ್ನಡ 04, ವಿಜಯನಗರ 06 ಸೇರಿದಂತೆ 240 ಮಂದಿಗೆ ಕೋವಿಡ್ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಇಂದು 220 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 993 ಸಕ್ರೀಯ ಸೋಂಕಿತರು ಇದ್ದಾರೆ ಎಂದು ತಿಳಿಸಿದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com