ರಾಜ್ಯ

ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ: ಸಿಎಂ ಸಿದ್ದರಾಮಯ್ಯ

1

ಶಿವಮೊಗ್ಗ : ರಾಮಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ. ರಾಮಮಂದಿರ ಯಾವ ರೀತಿ ನಿರ್ಮಿಸಿದ್ದಾರೆಂದು ನೋಡಿ ಬರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯವರು ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನಾವು ರಾಮನನ್ನು ವಿರೋಧಿಸುತ್ತಿಲ್ಲ. ರಾಮಮಂದಿರ ವಿಚಾರದಲ್ಲಿ ಬಿಜೆಪಿಯ ರಾಜಕೀಯ ವಿರೋಧಿಸುತ್ತಿದ್ದೇವೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲೂ ಈ ಬಗ್ಗೆ ಅವರು ಹಂಚಿಕೊಂಡಿದ್ದಾರೆ.

Advertisement. Scroll to continue reading.

ರಾಮಲಲ್ಲ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂಬ ನಮ್ಮ ಪಕ್ಷದ ಹಿರಿಯ ನಾಯಕರ ನಿಲುವನ್ನು ಬೆಂಬಲಿಸುತ್ತೇನೆ ಎಂಬ ಹೇಳಿಕೆಯ ವಿರುದ್ಧ ರಾಜ್ಯದ ಬಿಜೆಪಿ ನಾಯಕರು ಯಥಾಪ್ರಕಾರ ನನ್ನನ್ನು ಹಿಂದು ವಿರೋಧಿ ಎಂದು ಚಿತ್ರಿಸಲು ನಾಲಗೆ ಹರಿಬಿಡುತ್ತಿದ್ದಾರೆ.

ಹಿಂದೂ ವಿರೋಧಿ ಅಲ್ಲ :

ನಾನು ಹಿಂದೂ ವಿರೋಧಿಯೂ ಅಲ್ಲ, ಶ್ರೀರಾಮಚಂದ್ರನ ವಿರೋಧಿಯೂ ಅಲ್ಲ. ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಿಜೆಪಿ ನಾಟಕ ಮಂಡಳಿಯ ಪ್ರದರ್ಶನವೆಲ್ಲ ಮುಗಿದ ನಂತರ ಅರಾಮವಾಗಿ ಒಂದು ದಿನ ನಾನು ಅಯೋಧ್ಯೆಗೆ ಹೋಗಿ ರಾಮ ಮಂದಿರಕ್ಕೂ ಭೇಟಿ ನೀಡಿ ಬರಬೇಕೆಂದು ತೀರ್ಮಾನ ಮಾಡಿದ್ದೇನೆ. ನನ್ನನ್ನು ಶ್ರೀ ರಾಮಚಂದ್ರನ ವಿರೋಧಿಯೆಂದು ಕತೆ ಕಟ್ಟುತ್ತಿರುವವರ ಜೊತೆಗೂ ಆ ಭೇಟಿಯ ಪೋಟೋಗಳನ್ನು ಹಂಚಿಕೊಳ್ಳುತ್ತೇನೆ.

ನಾನು ಈಗಾಗಲೇ ತಿಳಿಸಿರುವಂತೆ ಪ್ರಧಾನಿ ಮೋದಿ ಮತ್ತು ಸಂಘ ಪರಿವಾರದ ನಾಯಕರು ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರೊಪಗಾಂಡ ಕಾರ್ಯಕ್ರಮ ಮಾಡಿರುವುದನ್ನು ಪ್ರತಿಭಟಿಸಿ ನಾವು ಆ ಸಮಾರಂಭದಿಂದ ದೂರ ಇದ್ದೇವೆಯೇ ಹೊರತು ನಾವೇನು ದೇವರು-ಧರ್ಮದ ವಿರೋಧಿಗಳಲ್ಲ.

Advertisement. Scroll to continue reading.

ನಾವು ಮಾತ್ರವಲ್ಲ ಹಿಂದೂ ಧರ್ಮದ ಹಿರಿಯ ಸ್ವಾಮೀಜಿಗಳಾದ ಶಂಕರಾಚಾರ್ಯರು ಕೂಡಾ ಜನವರಿ 22ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಇದರ ಬಗ್ಗೆ ಬಿಜೆಪಿ ಮತ್ತು ಆರ್.ಎಸ್.ಎಸ್ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ನನಗೂ ಇದೆ ಎಂದು ಹೇಳಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com