ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ಕಾಗಿ ರಾಮಭಕ್ತರು ಕಾಯುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದ ಬೇರೆ ಬೇರೆ ಭಾಗಗಳಿಂದ ಜನರು ಬರುತ್ತಿದ್ದಾರೆ. ಹೀಗಿರುವಾಗಲೇ ಅಮಿತಾಭ್ ಬಚ್ಚನ್ ಅವರು ಅಯೋಧ್ಯೆಯಲ್ಲಿ ದೊಡ್ಡ ಭೂಮಿ ಖರೀದಿ ಮಾಡಿದ್ದಾರೆ.
ಮುಂಬೈ ಮೂಲದ ಡೆವಲಪರ್ನಿಂದ ಅವರು ಈ ಭೂಮಿ ಖರೀದಿ ಮಾಡಿದ್ದಾರೆ. 10 ಸಾವಿರ ಚದರ ಅಡಿ ಜಾಗವನ್ನು ಅಮಿತಾಭ್ ಖರೀದಿ ಮಾಡಿದ್ದಾರೆ. ಇದರ ಬೆಲೆ 14.5 ಕೋಟಿ ರೂಪಾಯಿ ಎಂದು ತಿಳಿದು ಬಂದಿದೆ.
ಮುಂದಿನ ದಿನಗಳಲ್ಲಿ ಅಯೋಧ್ಯೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ. ಈ ವೇಳೆ ಭೂಮಿಗೆ ಬೆಲೆ ಹೆಚ್ಚಲಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅಮಿತಾಭ್ ಬಚ್ಚನ್ ಅವರು ಹೂಡಿಕೆ ಮಾಡಿದ್ದಾರೆ ಎಂದು ವರದಿ ಆಗಿದೆ
Advertisement. Scroll to continue reading.
ಜನವರಿ 22ರಂದು ಅದ್ದೂರಿಯಾಗಿ ರಾಮ ಜನ್ಮಭೂಮಿಯಲ್ಲಿ ಮಂದಿರ ಉದ್ಘಾಟನೆ ಆಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದರ ಉದ್ಘಾಟನೆ ಮಾಡಲಿದ್ದಾರೆ. ಅದಕ್ಕೂ ಮೊದಲು ಅಮಿತಾಭ್ ಬಚ್ಚನ್ ಇಲ್ಲಿ ಜಾಗ ಖರೀದಿ ಮಾಡಿದ್ದಾರೆ. ಅವರು ಇಲ್ಲಿ ಮನೆ ನಿರ್ಮಾಣ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮಿತಾಭ್ ಬಚ್ಚನ್ ಖರೀದಿ ಮಾಡಿರುವ ಜಾಗ ರಾಮ ಮಂದಿರದಿಂದ ಕೇವಲ 15 ನಿಮಿಷಗಳ ದಾರಿ. ಅಯೋಧ್ಯೆ ಇಂಟರ್ ನ್ಯಾಷನಲ್ ಏರ್ಪೋರ್ಟ್ನಿಂದ 30 ನಿಮಿಷಕ್ಕೆ ಈ ಜಾಗ ತಲುಪಬಹುದು.
ರಾಮ ಮಂದಿರ ಉದ್ಘಾಟನೆಯಲ್ಲಿ ನರೇಂದ್ರ ಮೋದಿ, ಅಮಿತಾಭ್ ಬಚ್ಚನ್ ಸೇರಿ 3000 ವಿಐಪಿಗಳು ಭಾಗಿ ಆಗಲಿದ್ದಾರೆ.
Advertisement. Scroll to continue reading.