ರಾಜ್ಯ

ಜ್ಞಾನವಾಪಿ ಮಸೀದಿಯಲ್ಲಿ ಕನ್ನಡ ಶಿಲಾ ಶಾಸನ ಪತ್ತೆ!

1

ಬೆಂಗಳೂರು : ಜ್ಞಾನವಾಪಿ ಮಸೀದಿ ಇರುವ ಜಾಗದಲ್ಲಿ ಪ್ರಾಚೀನ ಕಾಲದ ಶಾಸನಗಳ ಪತ್ತೆಯಾಗಿವೆ. ಅದರಲ್ಲಿ ಕನ್ನಡದ ಶಾಸನವೂ ಇದೆ ಎಂಬ ವಿಚಾರ ಎಎಸ್‌ಐ ವರದಿಯಿಂದ ಬಹಿರಂಗವಾಗಿದೆ. ಕನ್ನಡ ಬರಹವಿರುವ ಸಾಕ್ಷಿ ಕೂಡ ಎಎಸ್‌ಐ ವರದಿಯಲ್ಲಿದೆ.



ಈ ಹಿಂದೆ ದೇಗುಲವಾಗಿದ್ದ ಜ್ಞಾನವಾಪಿಯಲ್ಲಿ ಪುರಾತತ್ವ ಸರ್ವೆ ಇಲಾಖೆಗೆ ಒಟ್ಟು 34 ಶಿಲಾ ಶಾಸನಗಳು ಪತ್ತೆಯಾಗಿವೆ. ಈ ಪೈಕಿ ಕನ್ನಡದ ಶಿಲಾ ಶಾಸನವೂ ಇದೆ. ಕನ್ನಡ ಭಾಷೆಯಲ್ಲಿ ಇರುವ ಶಿಲಾ ಶಾಸನದ ಜೊತೆಯಲ್ಲೇ ತೆಲುಗು, ದೇವನಾಗರಿ ಭಾಷೆಗಳಲ್ಲೂ ಶಿಲಾ ಶಾಸನಗಳಿವೆ. ದೇವತೆಗಳಾದ ಜನಾರ್ದನ, ರುದ್ರ ಹಾಗೂ ಉಮೇಶ್ವರನ ಹೆಸರುಗಳು ಈ ಶಾಸನಗಳಲ್ಲಿ ಪತ್ತೆಯಾಗಿವೆ.

ಮಸೀದಿ ಇರುವ ಜಾಗದಲ್ಲಿ ಸಿಕ್ಕ ಪ್ರಾಚೀನ ಶಾಸನದಲ್ಲಿ ‘ದೊಡ್ಡರಸಯ್ಯನ ನರಸಂಣನಭಿಂನಹ’ (ದೊಡ್ಡರಸಯ್ಯನ ನರಸಿಂಹನ ಭಿನ್ನಹ) ಎಂದು ಕನ್ನಡದಲ್ಲಿ ಬರಹವಿರುವ ಸಾಕ್ಷಿ ಕೂಡ ವರದಿಯಲ್ಲಿದೆ. 

Advertisement. Scroll to continue reading.

ಕೆಲವು ಶಾಸನಗಳನ್ನು ಧ್ವಂಸ ಮಾಡಲಾಗಿದೆ. ಇನ್ನೂ ಕೆಲವು ಶಾಸನಗಳನ್ನು ಹಾಲಿ ಇರುವ ಕಟ್ಟಡಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ ಎಂದೂ ಸರ್ವೆಯಲ್ಲಿ ತಿಳಿಸಲಾಗಿದೆ. ಈ ಎಲ್ಲಾ ಶಿಲಾ ಶಾಸನಗಳೂ ಕೂಡಾ ಈ ಹಿಂದೆ ಇಲ್ಲಿ ದೇಗುಲ ಇತ್ತು ಅನ್ನೋದಕ್ಕೆ ಕುರುಹುಗಳಾಗಿವೆ ಎಂದು ಅಧ್ಯಯನ ವರದಿ ವಿವರಿಸಿದೆ.

17ನೇ ಶತಮಾನದಲ್ಲಿ ಇಲ್ಲಿ ಆದಿ ವಿಶ್ವೇಶ್ವರನ ದೇಗುಲ ಇತ್ತು. ಆ ದೇಗುಲಕ್ಕೆ ಇತ್ತು ಅನ್ನೋದಕ್ಕೆ ಇದೀಗ ವೈಜ್ಞಾನಿಕ ಸಾಕ್ಷ್ಯ ಸಿಕ್ಕಿದೆ. ಮೊಘಲ್ ಸಾಮ್ರಾಜ್ಯದ ದೊರೆ ಔರಂಗಜೇಬನ ಸೈನ್ಯ 17ನೇ ಶತಮಾನದಲ್ಲಿ ಈ ದೇಗುಲವನ್ನು ಧ್ವಂಸ ಮಾಡಿ ಅದರ ಮೇಲೆ ಮಸೀದಿ ನಿರ್ಮಿಸಿತ್ತು. ಔರಂಗಜೇಬನ ಆದೇಶದ ಮೇರೆಗೆ ಈ ಕೃತ್ಯ ಎಸಗಲಾಗಿತ್ತು.

ಎಎಸ್‌ಐ ಸರ್ವೆ ವೇಳೆ ಮಸೀದಿಯಲ್ಲಿ ಲೆಕ್ಕವಿಲ್ಲದಷ್ಟು ಹಿಂದೂ ದೇವರ ಮೂರ್ತಿಗಳು ಪತ್ತೆಯಾಗಿವೆ. ಕೆಲವು ಮೂರ್ತಿಗಳನ್ನು ವಿರೂಪಗೊಳಿಸಲಾಗಿದೆ. ಮತ್ತೆ ಕೆಲವನ್ನು ಗೋಡೆಯಲ್ಲಿ ಗಾರೆ ಸಮೇತ ಮುಚ್ಚಲಾಗಿದೆ. ಮೂರ್ತಿಗಳ ಜೊತೆಗೆ ಕೆತ್ತನೆ ಮಾಡಲಾಗಿದ್ದ ಪಕ್ಷಿಗಳು ಹಾಗೂ ಪ್ರಾಣಿಗಳ ಪ್ರತಿಕೃತಿಗಳೂ ಕೂಡಾ ಹಾಗೆಯೇ ಇವೆ. ಇನ್ನು ಮಸೀದಿ ಒಂದು ರೂಂನಲ್ಲಿ ಫಲಕ ಕೂಡಾ ಸಿಕ್ಕಿದೆ. ಈ ಫಲಕದಲ್ಲಿ ಔರಂಗಜೇಬನ ಕಾಲದಲ್ಲಿ ಮಸೀದಿ ನಿರ್ಮಾಣ ಮಾಡಲಾಗಿತ್ತು ಎಂಬ ಮಾಹಿತಿ ಇದೆ. ಅರೇಬಿಕ್ ಪರ್ಷಿಯನ್ ಭಾಷೆಯಲ್ಲಿ ಈ ಶಾಸನ ಇದೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com