ನವದೆಹಲಿ : ಕೇಂದ್ರ ಸರ್ಕಾರ ಶುಕ್ರವಾರ ಮೂವರಿಗೆ ಭಾರತ ರತ್ನ ಘೋಷಿಸಿದೆ.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ನರಸಿಂಹ ರಾವ್ ಮತ್ತು ಕೃಷಿ ವಿಜ್ಞಾನಿ, ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿ ಗೌರವಿಸುವುದಾಗಿ ಘೋಷಿಸಿದೆ.
ಕಳೆದ ವಾರ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ ‘ಭಾರತ ರತ್ನ’ ಘೋಷಿಸಲಾಗಿತ್ತು.
Advertisement. Scroll to continue reading.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನ ಮಂತ್ರಿಗಳಾದ ಪಿ ವಿ ನರಸಿಂಹ ರಾವ್, ಚೌಧರಿ ಚರಣ್ ಸಿಂಗ್ ಹಾಗೂ ದೇಶದ ಹಸಿರು ಕ್ರಾಂತಿಯ ಹರಿಕಾರ ಡಾ ಎಂ ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಗೌರವ ನೀಡುವುದಾಗಿ ಘೋಷಿಸಿದ್ದಾರೆ.