ಬೆಳ್ತಂಗಡಿ : ಡ್ರಾಯಿಂಗ್ ಶಿಕ್ಷಕನಿಂದ ಅವಮಾನಕ್ಕೆ ನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಧರ್ಮಸ್ಥಳದ ನಿವಾಸಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಶಾಲೆಯ ಡ್ರಾಯಿಂಗ್ ಶಿಕ್ಷಕ ರೂಪೇಶ್ ಪೂಜಾರಿ ಎಂಬಾತ ಮೃತಪಟ್ಟ ವಿದ್ಯಾರ್ಥಿನಿಯ ಬಗ್ಗೆ ಇನ್ನೊಂದು ವಿದ್ಯಾರ್ಥಿನಿಗೆ ಅವಮಾನ ರೀತಿಯಲ್ಲಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ.
Advertisement. Scroll to continue reading.
ಮರುದಿನ ತಾಯಿ ಜೊತೆ ಹೋಗಿ ವಿದ್ಯಾರ್ಥಿನಿ ವಿಚಾರಿಸಿದ್ದಾಳೆ. ಬಳಿಕ ಫೆ.7ರಂದು ವಿದ್ಯಾರ್ಥಿನಿ ಶಾಲೆಗೆ ಬರುವಾಗ ಬಿಸ್ಕೆಟ್ ಪ್ಯಾಕೆಟ್ ಜೊತೆ ಇಲಿ ಪಾಷಣ ಅಂಗಡಿಯಿಂದ ಖರೀದಿ ಮಾಡಿ ತಂದಿದ್ದಾಳೆ. ಬಳಿಕ ಶಾಲೆಯಲ್ಲಿ ಬಿಸ್ಕೆಟ್ ಜೊತೆ ಇಲಿ ಪಾಶಣ ಪೇಸ್ಟ್ ಮಿಕ್ಸ್ ಮಾಡಿ ಸೇವಿಸಿದ್ದಾಳೆ. ತಕ್ಷಣ ಶಾಲೆಯ ಶಿಕ್ಷಕರು ಆಕೆಯನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು.
ವಿದ್ಯಾರ್ಥಿನಿ ಲಿವರ್ ಮತ್ತು ಕಿಡ್ನಿ ನಿಷ್ಕ್ರಿಯವಾಗಿ ಫೆ.12 ರಂದು ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾಳೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರೂಪೇಶ್ ಪೂಜಾರಿ ವಿರುದ್ಧ ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ IPC 354D,509,POCSO Act 12 ,75JJ Act ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Advertisement. Scroll to continue reading.