ಉಪ್ಪೂರು : ಕೊಳಲಗಿರಿ ಯುವ ವಿಚಾರ ವೇದಿಕೆ : 23ನೇ ವಾರ್ಷಿಕೋತ್ಸವ
Published
0
ಉಪ್ಪೂರು : ಕೊಳಲಗಿರಿ ಯುವ ವಿಚಾರ ವೇದಿಕೆಯ 23ನೇ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್ ಅವರ ಅಮೃತ ಹಸ್ತದಿಂದ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ರಾಜೇಂದ್ರ ವಹಿಸಿದ್ದರು.
Advertisement. Scroll to continue reading.
ಈ ವೇಳೆ ಹಡಿಲು ಭೂಮಿ ಕೃಷಿಯ ಫಸಲನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಯಿತು.
ಸ್ಪಂದನ ವಿಶೇಷ ಚೇತನ ಶಾಲೆ ಮುಖ್ಯಸ್ಥ ಉಮೇಶ್, ಜನಾರ್ದನರನ್ನು ಸನ್ಮಾನಿಸಲಾಯಿತು. ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳಾದ ಹರ್ಷಿತಾ ಪ್ರಜ್ಞಾ, ರಿಯಾ, ಪ್ರೀತಮ್ರನ್ನು ಅಭಿನಂದಿಸಲಾಯಿತು. ವೇದಿಕೆಯ ಅಭಿವೃದ್ದಿ ಕಾರ್ಯದಲ್ಲಿ ಸಹಕರಿಸಿದ ದಾನಿ ಪ್ರಶಾಂತ್ ಶೆಟ್ಟಿ ಅಮ್ಮುಂಜೆ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಉಪ್ಪೂರು ವ್ಯ.ಸೇ.ಸ. ಸಂಘದ ಅಧ್ಯಕ್ಷ ರಮೇಶ್ ಎನ್ ಶೆಟ್ಟಿ, ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ನ ಧರ್ಮಗುರು ರೆ.ಫಾ| ಜೋಸೆಫ್ ಮಚಾದೋ, ಉದ್ಯಮಿ ರೋಯಲ್ ರತ್ನಾಕರ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅಶ್ವಿನ್ ರೋಚ್, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಪ್ರಾಂಕಿ ಡಿಸೋಜ, ಮಾಹೆ ಮಣಿಪಾಲದ ಪ್ರಾಧ್ಯಾಪಕ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.
ಇನ್ನು ಬೆಳಿಗ್ಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ರಾಜಶ್ರೀ ಮಸ್ಕರೇನಸ್, ಸಮಾಜ ಸೇವಕ ರಮೇಶ್ ಕರ್ಕೇರ, ಉದ್ಯಮಿ ಸಂದೀಪ ನಾಯಕ್ ಅವರ ಉಪಸ್ಥಿತರಿದ್ದರು.
ಅಧ್ಯಕ್ಷ ದಿನೇಶ್ ಶೆಟ್ಟಿ, ಉಪಾಧ್ಯಕ್ಷ ಸಂದೀಪ್ ಶೆಟ್ಟಿ ಸ್ವಾಗತಿಸಿ, ಅಶೋಕ್ ಹಾಗೂ ಸುರೇಶ್ ವಂದಿಸಿದರು. ವೇದಿಕೆಯ ಸದಸ್ಯರಾದ ಯೋಗೀಶ್ ಗಾಣಿಗ, ಸದಾಶಿವ ಕುಮಾರ್, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ನಾಟಕ ಪ್ರದರ್ಶನ :
Advertisement. Scroll to continue reading.
ಸಭಾ ಕಾರ್ಯಕ್ರಮದ ಮೊದಲು ಸ್ಥಳೀಯ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ವೇದಿಕೆಯ ಸದಸ್ಯ, ನೃತ್ಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ಅವರ ನಿರ್ದೇಶನದಲ್ಲಿ ಸ್ಪಂದನ ವಿಶೇಷ ಚೇತನ ಶಾಲೆ ವಿದ್ಯಾರ್ಥಿಗಳು ಮನೋಜ್ಞವಾಗಿ ಅಭಿನಯಿಸಿದ ನೃತ್ಯ ರೂಪಕ “ಶ್ರೀ ರಾಮಾಯಣ ಕಥಾ ಸಾರಾಂಶ” ಪ್ರದರ್ಶನವಾಯಿತು.
ಯೋಗೀಶ್ ಗಾಣಿಗ ಕೊಳಲಗಿರಿ ನಿರ್ದೇಶನದಲ್ಲಿ ತುಳು ಸಾಮಾಜಿಕ ಹಾಸ್ಯಮಯ ನಾಟಕ “ಆಜ್ಜಿಗ್ ಏರ್ಲಾ ಇಜ್ಜಿ” ಯಶಸ್ವಿಯಾಗಿ ಪ್ರದರ್ಶನವಾಯಿತು.