ಬೆಳಗಾವಿ: ಒಂದು ವೇಳೆ ನನಗೆ ಟಿಕೆಟ್ ಸಿಗಲಿ ಅಥವಾ ಸಿಗದಿರಲಿ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ನನಗೆ ಪಕ್ಷವು ನಾಯಕ ಸ್ಥಾನ ನೀಡಿದೆ ಎಂದು ಕೇಂದ್ರ ಸಚಿವೆ ಶೋಒಭಾ ಕರಂದ್ಲಾಜೆ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೆಲವರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ಇದನ್ನು ಹೈಕಮಾಂಡ್ ಸಹ ಗಮನಿಸಿದೆ. ನನಗೆ ಈ ಬಾರಿ ಟಿಕೆಟ್ ಸಿಗುವ ವಿಶ್ವಾಸವಿದೆ. ನಾನು ಹತ್ತು ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳುತ್ತೇನೆ ಎಂದರು.
ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಅದು ಹೈಕಮಾಂಡಿಗೆ ಬಿಟ್ಟ ವಿಚಾರ ಆದರೆ ಒಳ್ಳೆಯ ಸ್ಥಾನಮಾನ ಹಾಗೂ ಗೌರವ ಸಿಗುತ್ತದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.
Advertisement. Scroll to continue reading.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಹೇಗಿದೆ ಎಂದರೆ ಇಲ್ಲಿ ಬಹುಸಂಖ್ಯಾತರಿಗೆ ರಕ್ಷಣೆ ಇಲ್ಲ.ಅಲ್ಪಸಂಖ್ಯಾತರಿಗೆ ಎಲ್ಲವೂ ಇದೆ. ಅವರಿಗೆ ಮೃಷ್ಠಾನ್ನ ಭೋಜನ. ನಮಗೆ ಒಣರೊಟ್ಟಿ ಊಟ ಸ್ಥಿತಿ ನಿರ್ಮಾಣವಾಗಿದೆ. ವಿಧಾನಸೌಧ, ಮುಖ್ಯಮಂತ್ರಿಗಳ ಕಚೇರಿ ಮತ್ತು ಮನೆ ಭಯೋತ್ಪಾದನೆ ಬೆಳೆಸುವ ಕೇಂದ್ರಗಳಾಗಿವೆ. ನಾವು ನಿಷೇಧ ಮಾಡಿರುವ ಸಂಘಟನೆಗಳ ಸದಸ್ಯರು ಇವರ ಮನೆ ಕಚೇರಿ ಹಾಗೂ ಗೃಹಸಚಿವರ ಮನೆಯ ಮುಂದೆ ಕುಳಿತಿರುತ್ತಾರೆ ಎಂದರು.
Advertisement. Scroll to continue reading.