ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬುಧವಾರ ಬಳ್ಳಾರಿ ಮೂಲದ ಶಬ್ಬೀರ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಶಬ್ಬೀರ್ ನನ್ನು ವಶಕ್ಕೆ ಪಡೆಯಲಾಗಿದ್ದು, ಈತ ಬಳ್ಳಾರಿಯ ಟ್ಯಾಂಕ್ ಬಂಡ್ ರೋಡ್ ಗಲ್ಲಿ ನಿವಾಸಿಯಾಗಿದ್ದಾನೆ. ತೋರಣಗಲ್ನಲ್ಲಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆಸಿದವನಿಗೆ ಕರೆ ಮಾಡಿರುವ ಶಂಕೆಯಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬಳ್ಳಾರಿ, ಆಂಧ್ರ ಪ್ರದೇಶ, ಬೆಂಗಳೂರಿನಲ್ಲಿ ಸತತ ತನಿಖೆ ಮುಂದುವರಿಸಿದ್ದಾರೆ. ಎನ್ಐಎ ಅಧಿಕಾರಿಗಳು ಶಬ್ಬೀರನ ಹಿನ್ನೆಲೆ ಕೆದುಕುತ್ತಿದ್ದಾರೆ. ಶಂಕಿತನ ಪರಿಚಯದ ಬಗ್ಗೆ ಶಬ್ಬೀರ್ ಮಾಹಿತಿ ಬಿಚ್ಚಿಟ್ಟಿದ್ದಾನೆ. ಬಳ್ಳಾರಿ ಹೊಸ ಬಸ್ ನಿಲ್ದಾಣದಿಂದ ಬುಡಾ ಕಾಂಪ್ಲೆಕ್ಸ್ ಬಳಿ ಆಟೋದಲ್ಲಿ ಬಂದು ಇಳಿದಿದ್ದ ಶಂಕಿತ ಬಾಂಬರ್ ಬಳಿಕ ಶಬ್ಬೀರನನ್ನ ಭೇಟಿ ಮಾಡಿದ್ದ. ಸದ್ಯ ಈ ಭೇಟಿಯ ಸಿಸಿ ಟಿವಿ ಫೂಟೋಜ್ ಆಧಾರದ ಮೇಲೆ ವಶಕ್ಕೆ ಪಡೆಯಲಾಗಿದೆ.
Advertisement. Scroll to continue reading.