ರಾಷ್ಟ್ರೀಯ

ಚುನಾವಣೆಗೆ ಖರ್ಚು ಮಾಡಲು ಪಕ್ಷದಲ್ಲಿ ಹಣವಿಲ್ಲ: ಖರ್ಗೆ

0

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಜನರಿಂದ ದೇಣಿಗೆ ಇಟ್ಟಿದ್ದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ನಮ್ಮ ಪಕ್ಷವು ಹಣದ ಕೊರತೆಯನ್ನು ಎದುರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಚುನಾವಣೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು. ಬಿಜೆಪಿಯು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ. ಆದಾಯ ತೆರಿಗೆ ಮೂಲಕ ಪಕ್ಷಕ್ಕೆ ಭಾರಿ ದಂಡವನ್ನು ವಿಧಿಸುತ್ತಿದೆ. ಆದರೆ ಅವರು ಸಾವಿರಾರು ಕೋಟಿ ರೂಪಾಯಿಗಳನ್ನು ಬಹಿರಂಗಪಡಿಸಲು ಸಿದ್ಧರಿಲ್ಲ. ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಹೊರತಾಗಿಯೂ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಜನರು ದೇಣಿಗೆಯಾಗಿ ನೀಡಿದ್ದು ನಮ್ಮ ಪಕ್ಷಕ್ಕೆ ಸೇರಿದ ಹಣ. ಆದರೆ ಬಿಜೆಪಿಯವರು ಅದನ್ನು ಸ್ಥಗಿತಗೊಳಿಸಿದ್ದಾರೆ. ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ. ಆದರೆ, ಅವರು (ಬಿಜೆಪಿ) ಪಡೆದಿರುವ ಚುನಾವಣಾ ಬಾಂಡ್‌ಗಳ ಬಗ್ಗೆ ಬಹಿರಂಗಪಡಿಸುತ್ತಿಲ್ಲ. ಏಕೆಂದರೆ ಅವರ ಕಳ್ಳತನ ಹೊರಗೆ ಬರಬಹುದು. ಅವರ ತಪ್ಪು ಕೆಲಸಗಳು ಹೊರಬರಬಹುದು. ಆದ್ದರಿಂದ ಅವರು ಜುಲೈವರೆಗೆ ಸಮಯ ಕೇಳಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com