ಅಂತಾರಾಷ್ಟ್ರೀಯ

ಭಾರತ ‘ಸೂಪರ್ ಪವರ್’ ಆಗುವತ್ತ ಹೆಜ್ಜೆ ಇಡುತ್ತಿದೆ, ನಾವು ‘ಭಿಕ್ಷೆ’ ಬೇಡುತ್ತಿದ್ದೇವೆ: ಪಾಕ್ ನಾಯಕನ ಬೇಸರದ ಮಾತು

0

ಇಸ್ಲಮಾಬಾದ್: ಸೂಪರ್‌ ಪವರ್‌ ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್‌ ಪವರ್‌ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.

ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್‌ ಬೇಸರಿಸಿದ್ದಾರೆ.

Advertisement. Scroll to continue reading.

ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಸೋಮವಾರ ತಮ್ಮ ಮಾಜಿ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಬೆಂಬಲಕ್ಕೆ ಬಂದರು ಮತ್ತು ವಿರೋಧ ಪಕ್ಷಕ್ಕೆ ರ್ಯಾಲಿಗಳನ್ನು ಆಯೋಜಿಸುವ ಮತ್ತು ಸರ್ಕಾರ ರಚಿಸುವ ಹಕ್ಕಿದೆ ಎಂದು ಹೇಳಿದರು. ಅವರ ಬಣದ ಜಮಿಯತ್ ಉಲೇಮಾ-ಎ-ಇಸ್ಲಾಂ ಫಜಲ್ (ಜೆಯುಐ-ಎಫ್) ಮುಖ್ಯಸ್ಥ ರೆಹಮಾನ್ ಸೋಮವಾರ ಪಾಕಿಸ್ತಾನಿ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಬಲ ಭಾಷಣ ಮಾಡಿದರು ಮತ್ತು ರಾಜಕೀಯ ವ್ಯವಸ್ಥೆಯನ್ನು ರಿಗ್ಗಿಂಗ್ ಮಾಡಿದ್ದಾರೆ ಎಂದು ಪ್ರಬಲ ಸ್ಥಾಪನೆಯನ್ನು ಟೀಕಿಸಿದರು.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com