ಸಿನಿಮಾ

ಧಾರಾವಾಹಿ ದೃಶ್ಯವೊಂದರಲ್ಲಿ ಎಡವಟ್ಟು; ‘ಸೀತಾ ರಾಮ’ ನಟಿ ಮೇಲೆ ಬಿತ್ತು ಕೇಸ್!

2

ಸದ್ಯ ಕಿರುತೆರೆಯಲ್ಲಿ ‘ಸೀತಾರಾಮ’ ಜನಪ್ರಿಯ ಧಾರಾವಾಹಿ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಈ ಧಾರಾವಾಹಿಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಅದರಲ್ಲೂ ಅಗ್ನಿಸಾಕ್ಷಿಯ ಸನ್ನಿಧಿ ಖ್ಯಾತಿಯ ವೈಷ್ಣವಿಗೌಡ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ವೈಷ್ಣವಿಗೆ ಅವರದೇ ಆದ ಫ್ಯಾನ್ಸ್ ಫಾಲೋವರ್ಸ್ ಇದ್ದು, ಸೀತಾರಾಮ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಆದರೆ, ಈಗ ವೈಷ್ಣವಿ ಗೌಡ ಮೇಲೆ ಪ್ರಕರಣ ದಾಖಲಾಗಿದೆ.

ಸೀರಿಯಲ್  ಶೂಟಿಂಗ್ ನಲ್ಲಿ ಎಡವಟ್ಟು:

Advertisement. Scroll to continue reading.

ಧಾರಾವಾಹಿಯ ದೃಶ್ಯವೊಂದರಲ್ಲಿ ವೈಷ್ಣವಿ ಗೌಡ ಹಾಗೂ ಅವರ ಸ್ನೇಹಿತೆ ಸ್ಕೂಟರಿನಲ್ಲಿ ಪ್ರಯಾಣ ಮಾಡುತ್ತಾ ಇರುತ್ತಾರೆ. ಆದರೆ ಈ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಹಿಂದೆ ಕುಳಿತು ಪ್ರಯಾಣ ಮಾಡುತ್ತಿರುವ ವೈಷ್ಣವಿ ಗೌಡ ಅವರು ಸೀರಿಯಲ್ ಶೂಟಿಂಗ್ ವೇಳೆ ಹೆಲ್ಮೆಟ್ ಧರಿಸಿರುವುದಿಲ್ಲ.

ಧಾರಾವಾಹಿಯನ್ನು ಹಲವಾರು ಜನರು ನೋಡುತ್ತಾರೆ. ನಟ – ನಟಿಯರನ್ನು ಅನುಕರಿಸುತ್ತಾರೆ ಎನ್ನುವ ಕಾರಣಕ್ಕೆ ಇದೀಗ ಅವರಿಗೆ ದಂಡ ವಿಧಿಸಲಾಗಿದೆ. 

ಈ ಸೀರಿಯಲ್‌ ದೃಶ್ಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತೆ  ಗಮನಿಸಿದ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎಂಬುವವರು ಮಂಗಳೂರು ನಗರ ಪೊಲೀಸರಿಗೆ ಈ ಬಗ್ಗೆ ದೂರು ಸಲ್ಲಿಸಿದ್ದಾರೆ. ಸಮಾಜಕ್ಕೆ ಇದರಿಂದ ತುಂಬಾ ತಪ್ಪು ಸಂದೇಶ ರವಾನೆ ಆಗುತ್ತಾ ಇದೆ ಎಂದು ಹೇಳಿದ್ದಾರೆ. ಆ ಕಾರಣದಿಂದ ಅವರು ಕಂಪ್ಲೇಂಟ್ ಮಾಡಿದ್ಧಾರೆ. ಈ ಕೂಡಲೇ ಆ ನಟಿಯ ಮೇಲೆ, ಸೀರಿಯಲ್‌ ನಿರ್ದೇಶಕ ಮತ್ತು ವಾಹಿನಿ ಮೇಲೆ ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಜಯಪ್ರಕಾಶ್ ಬರೆದಿದ್ದಾರೆ.

ದೂರಿನ ಆಧಾರದ ಮೇಲೆ ಮಂಗಳೂರು ಪೂರ್ವ ಸಂಚಾರ ಠಾಣೆಗೆ ಈ ಕೇಸ್‌ ವರ್ಗಾವಣೆಯಾಗಿತ್ತು.  ವಾಹಿನಿ ಮತ್ತು ನಟಿಗೆ ನೋಟಿಸ್‌ ರವಾನಿಸಲಾಗಿತ್ತು. ಜತೆತಗೆ ಈ ಸೀರಿಯಲ್‌ ಶೂಟಿಂಗ್‌ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ನಡೆದಿದ್ದರಿಂದ ಆ ಭಾಗದ ರಾಜಾಜಿನಗರ ಪೊಲೀಸ್‌ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಆ ನಂತರದಲ್ಲಿ ತಲಾ 500 ರೂಪಾಯಿ ದಂಡ ವಿಧಿಸಲಾಗಿದೆ. ಗಾಡಿಯ ಓನರ್ ಸವಿತಾ ಎನ್ನುವವರಿಗೂ 500 ರೂ ದಂಡ ವಿಧಿಸಲಾಗಿದೆ.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com