ಬೆಳ್ಳರ್ಪಾಡಿ : ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ
Published
0
ಪೆರ್ಡೂರು : ಆರ್.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ ಇಂದು(ಜು.21) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳರ್ಪಾಡಿಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೆರ್ಡೂರು ಉಪವಲಯ ಅರಣ್ಯ ಅಧಿಕಾರಿ ನವೀನ್ ಬಿ.ಎನ್ ನೆರವೇರಿಸಿದರು. ರೋಟರಿ ಕ್ಲಬ್ ಟೌನ್ ಮಣಿಪಾಲ್ ಅಧ್ಯಕ್ಷ ಡಾ. ಮನೋಜ್ ಕುಮಾರ್ ನಾಗಸಂಪಿಗೆ ಅಧ್ಯಕ್ಷತೆಯನ್ನು ವಹಿಸಿದ್ದರು.
Advertisement. Scroll to continue reading.
ಈ ಸಂದರ್ಭ ಆರೋಗ್ಯ ಅಧಿಕಾರಿ ಜಯಶ್ರೀ ಹಾಗೂ ಬೆಳ್ಳರ್ಪಾಡಿಯ ರಾಷ್ಟ್ರಮಟ್ಟದ ಕ್ರೀಡಾ ಪ್ರತಿಭೆ ಕುಮಾರಿ ಪ್ರೇಕ್ಷರನ್ನು ಸನ್ಮಾನಿಸಲಾಯಿತು.
ಶಾರದಾ ರೆಸಿಡೆನ್ಸಿ ಶಾಲಾ ಶಿಕ್ಷಕಿ ಪಾವನ ಗಂಗಾ ಬಾಯರಿ, ಆರ್.ಸಿ.ಸಿ ಬೆಳ್ಳರ್ಪಾಡಿ ಅಧ್ಯಕ್ಷ ರೋಹಿತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೃಷ್ಣಾನಂದ ನಾಯಕ್, ಮಾಜಿ ಪ್ರಧಾನ ಕಾರ್ಯದರ್ಶಿ ನಿತಿನ್ ಕುಮಾರ್ ಶೆಟ್ಟಿ, ಗ್ರಾಮ ಪಂಚಾಯತಿ ಸದಸ್ಯ ಸತೀಶ್ ಶೆಟ್ಟಿ, ನಿಕಟ ಪೂರ್ವ ಸದಸ್ಯ ರಾಧಾಕೃಷ್ಣ ಪ್ರಭು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಕೆ.ಸ್ವಾತಿ ರಾವ್, ಶಾಲೆಯ ಮುಖ್ಯೋಪಾಧ್ಯಾಯ ಸುರೇಶ ನಾಯ್ಕ್ , ಅಂಗನವಾಡಿ ಕಾರ್ಯಕರ್ತೆ ಸಬಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಮಣಿಪಾಲ್ ರೋಟರಿ ಯ ಅಧ್ಯಕ್ಷ ಡಾ. ಮನೋಜ್ ಕುಮಾರ್ ನಾಗಸಂಪಿಗೆ ಸ್ವಾಗತಿಸಿದರು. ಆರ್.ಸಿ.ಸಿ ಕೋಶಾಧಿಕಾರಿ ಸಂದೀಪ್ ಪೂಜಾರಿ, ಆರ್ ಸಿ ಸಿ ಸದಸ್ಯ ಜಗದೀಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.