ಕೆಎಸ್ಆರ್ಟಿಸಿ ಬಸ್ – ಲಾರಿ ನಡುವೆ ಅಪಘಾತ; ಚಾಲಕರಿಗೆ ಗಂಭೀರ ಗಾಯ
Published
0
ಗುಂಡ್ಯ : ಕೆಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ ಬಸ್ ಹಾಗೂ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗುಂಡ್ಯದಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಕೆಎಸ್ಆರ್ಟಿಸಿ ಬಸ್ ಸಾಗುತ್ತಿತ್ತು. ತಿರುವಿನಲ್ಲಿ ಎದುರಿನಿಂದ ವೇಗವಾಗಿ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ, ಲಾರಿಯ ಮುಂಭಾಗಕ್ಕೂ ಹಾನಿಯಾಗಿದೆ. ಘಟನೆಯಲ್ಲಿ ಚಾಲಕರು ಸೇರಿದಂತೆ ಒಟ್ಟು 4 ಜನರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಬಸ್ ಹಾಗೂ ಲಾರಿ ಚಾಲಕರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.