ಮಂಗಳೂರು/ಉಡುಪಿ : ದ.ಕ ಜಿಲ್ಲೆಯಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿದೆ. ಒಂದು ತಿಂಗಳಲ್ಲಿ ಎರಡು ಹ*ತ್ಯೆ ನಡೆದಿದೆ. ಇದೀಗ ರಾಜ್ಯ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಗುಪ್ತಚರ ವಿಭಾಗದ ಡಿಐಜಿಯಾಗಿರುವ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
Advertisement. Scroll to continue reading.
ಅನುಪಮ್ ಅಗರ್ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ(ಸಿ.ವಂಶಿ ಕೃಷ್ಣ ಅವರ ಜಾಗಕ್ಕೆ) ವರ್ಗಾವಣೆ ಮಾಡಲಾಗಿದೆ.
ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಆಯುಕ್ತರಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ
ಗುಪ್ತಚರ ವಿಭಾಗದ ಎಸ್ ಪಿ ಆಗಿರುವ ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ.
Advertisement. Scroll to continue reading.