ಬೈಂದೂರು : ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ತಗ್ಗರ್ಸೆ ಆಶ್ರಯದಲ್ಲಿ 5 ನೇ ವರ್ಷದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಯುವಕರ ಕ್ರೀಡಾ ಮನೋಭಾವನೆಯನ್ನು ಹೆಚ್ಚಿಸುವಂತ ಕಾರ್ಯ ಇದಾಗಿದ್ದು, ಗ್ರಾಮೀಣ ಮಟ್ಟದಲ್ಲಿ ಈ ಒಂದು ಪಂದ್ಯಾಟವನ್ನು ಏರ್ಪಡಿಸಿರುವುದು ಬಹಳ ಉತ್ತಮವಾದ ಕೆಲಸ. ಮುಂದಿನ ದಿನಗಳಲ್ಲಿ ಯುವಕರ ಸಂಘಟನೆ ಈ ಭಾಗದಲ್ಲಿ ಬೆಳೆಯುವುದಕ್ಕೆ ದಾರಿ ದೀಪವಾಗುತ್ತದೆ ಎಂದರು.
ನಿವೃತ್ತ ಫ್ರೌಡಶಾಲಾ ಶಿಕ್ಷಕರಾದ ಗೋವಿಂದ ಬಿಲ್ಲವ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನುಷ್ಕಾ ಶೆಟ್ಟಿ ಯವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಜು ಗಾಣಿಗ ಹುಳುವಾಡಿ, ಮುಖ್ಯೋಪಾಧ್ಯಾಯ ತಿಮ್ಮಪ್ಪ ಗಾಣಿಗ, ಸ್ಥಳೀಯ ಉದ್ಯಮಿಗಳಾದ ಮುಕಾಂಬು ಶೆಟ್ಟಿ ನೆಲ್ಯಾಡಿ, ಗಣೇಶ್ ಬಿಲ್ಲವ, ಮಾಧವ ಕೋಟ್ಯಾನ್, ಪ್ರಮೋದ ಆಚಾರ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ರವೀಂದ್ರ ಟಿ. ಗಾಣಿಗ ಮತ್ತು ತಿಮ್ಮಪ್ಪ ಗಾಣಿಗ ನಿರೂಪಿಸಿದರು. ಹರ್ಷೇಂದ್ರ ಆಚಾರ್ಯ ಸ್ವಾಗತಿಸಿದರು. ಮಹೇಶ್ ಗಾಣಿಗ ವಂದಿಸಿದರು.
Advertisement. Scroll to continue reading.