ಅಹಮದಾಬಾದ್: ಇಂದು ನಡೆಯ ಬೇಕಾಗಿದ್ದ ಐಪಿಎಲ್ ಪಂದ್ಯ ಮುಂದೂಡಲಾಗಿದೆ. ಕೋಲ್ಕತ್ತ ನೈಟ್ ರೈಡರ್ಸ್ ಆಟಗಾರರಾದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಹಾಗಾಗಿ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಸೋಮವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವೆ ನಡೆಯಬೇಕಿರುವ ಪಂದ್ಯ ಮುಂದೂಡಿಕೆಯಾಗಿದೆ ಎಂದು ವರದಿಯಾಗಿದೆ.
Advertisement. Scroll to continue reading.