ಶಿವಮೊಗ್ಗ : ದೊಡ್ಡ ಪೇಟೆ ಠಾಣೆಯ ಆವರಣದಲ್ಲಿ ಗಾಂಧಿ ಬಜಾರ್ ಸಗಟು ವ್ಯಾಪಾರಸ್ಥರ ಸಂಘ ವತಿಯಿಂದ ಪೊಲೀಸರಿಗೆ ಸ್ಟೀಮರ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು. ಸಂಸದ ಬಿ.ವೈ. ರಾಘವೇಂದ್ರರವರು ಪೊಲೀಸರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹಕ ಪಟ್ಟಾಭಿರಾಮ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಎಸ್ ಜ್ಯೋತಿಪ್ರಕಾಶ್ ರವರು, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಡಿ.ಎಸ್.ಅರುಣ್, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ , ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ನಾರಾಯಣ, ಪಾಲಿಕೆ ಸದಸ್ಯ ವಿಶ್ವಾಸ್, ಮತ್ತು ನಿಗಮ ನಿರ್ದೇಶಕರಾದ ರಾಜಾರಾಂ ಭಟ್, ದಿನೇಶ್ ಹರಿಗೆ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.