ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಕೊರೋನಾ ನಿಯಂತ್ರಣಕ್ಕಾಗಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಕುರಿತು ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರ ನೇತೃತ್ವದಲ್ಲಿ ನಗರದ ತಾ.ಪಂ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಯಿತು.
ವೈದ್ಯರು, ಆಶಾ ಕಾರ್ಯಕರ್ತರು, ಪಿ.ಡಿ.ಓ ಸೇರಿದಂತೆ ಎಲ್ಲರೂ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಉತ್ತಮ ರೀತಿಯಲ್ಲಿ ಕರೋನಾ ತಡೆಗಟ್ಟುವ ಬಗ್ಗೆ ಚರ್ಚೆ ನಡೆಯಿತು. ಶಾಸಕರ ನಿಧಿಯಿಂದ ೧೦೦ ಪಲ್ಸ್ ಮೀಟರ್, ಅಗತ್ಯವಿರುವಷ್ಟು ಥರ್ಮಲ್ ಸ್ಕಾನರ್, ೧೦೦ ಬೆಡ್ ಗೆ ಹಣವನ್ನು ಬಿಡುಗಡೆ ಮಾಡುವುದಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಕೊರೋನಾ ನಿಯಂತ್ರಣಕ್ಕೆ ವೈದ್ಯರು, ಆಶಾ ಕಾರ್ಯಕರ್ತರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸಾಮಾಗ್ರಿಗಳನ್ನು ನೀಡಲು ನಾನು ಬದ್ಧನಿದ್ದೇನೆ ಎಂದು ವೈದ್ಯಕೀಯ ಸಿಬ್ಬಂದಿಗಳಿಗೆ ಧೈರ್ಯ ತುಂಬಿದರು.
Advertisement. Scroll to continue reading.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ೧೦೦ ಬೆಡ್ ಗಳನ್ನು ಸಿದ್ದಪಡಿಸಿ ಯಾವುದಾದರೂ ಶಾಲೆಯಲ್ಲಿ ವ್ಯವಸ್ಥೆ ಮಾಡಿ, ಅಗತ್ಯ ಇದ್ದಾಗ ಬಳಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪಾಸಿಟಿವ್ ಬಂದ ಮನೆಗಳಿಗೆ ರಿಬ್ಬನ್ ಕಟ್ಟಲು ತಿಳಿಸಲಾಗಿದೆ. ಶಾಸಕರ ನಿಧಿಯಿಂದ ಸ್ಯಾನಿಟೈಸರ್, ಪಲ್ಸ್ ಆಕ್ಸಿಮೀಟರ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಕಮೀಷನರ್ ಕೆ.ರಾಜು, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ತಾಲೂಕು ವೈದ್ಯಾಧಿಕಾರಿ ನಾಗಭೂಷಣ ಉಡುಪ, ಪಂ. ಪಿಡಿಓ ಗಳು, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು