ವರದಿ : ಬಿ.ಎಸ್.ಆಚಾರ್ಯ
ಉಡುಪಿ : ಕೊರೋನಾ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹದಿಮೂರು ಗ್ರಾಮಪಂಚಾಯತಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಿತು.
ಗ್ರಾಮ ಪಂಚಾಯತಿ ಸದಸ್ಯರು ಮತ್ತು ಕಾರ್ಯ ಪಡೆಯವರೊಂದಿಗೆ ಸಮಾಲೋಚನೆ ನಡೆಯಿತು.
ಈ ವೇಳೆ ಹಂದಾಡಿ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರಿಗೆ ನೀಡಲಾದ ಆಕ್ಸಿಮೀಟರ್ ಸರಿ ಇಲ್ಲದಿರುವ ಕುರಿತು ಗಮನ ಸೆಳೆದರು.
ವಾರಂಬಳ್ಳಿ, ಚಾಂತಾರು, ನೀಲಾವರ, ಆರೂರು, ನಾಲ್ಕೂರು, ಕಳ್ತೂರು, ಕಳ್ತೂರು, ಉಪ್ಪೂರು, ಹಾವಂಜೆ, ಕರಜೆ, ಕೊಕ್ಕರ್ಣೆ, ಚೇರ್ಕಾಡಿಯ ಗ್ರಾಮ ಪಂಚಾಯತಿಯಲ್ಲಿ ನೇರ ಸಂವಾದ ನಡೆಯಿತು. ಹಾರಾಡಿ ಗ್ರಾಮ ಪಂಚಾಯತಿಯಲ್ಲಿ ವಿದ್ಯುತ್ ನಿಲುಗಡೆಗೊಂಡ ಕಾರಣ ಅಲ್ಲಿನ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ವಾರಂಬಳ್ಳಿ ಗ್ರಾಮ ಪಂಚಾಯತಿಯಲ್ಲಿ ಇದ್ದು ಸಂವಾದದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ವೀಡಿಯೋ ಸಂವಾದದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಲಾಲಾಜಿ ಆರ್.ಮೆಂಡನ್, ಶಾಸಕ ರಘುಪತಿ ಭಟ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಕಿರಣ್ ಪೆಡ್ನೇಕರ್ ಹಾಗೂ ಸಂಭಂದ ಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು
Advertisement. Scroll to continue reading.