Uncategorized

ಕನ್ನಡದ ಹಿರಿಯ ನಟ ಬಿ.ಎಂ.ಕೃಷ್ಣೇಗೌಡ ವಿಧಿವಶ

0

ಚಂದನವನ : ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ನಟಿಸುತ್ತಿದ್ದ ಹಿರಿಯ ಕಲಾವಿದ ಬಿ.ಎಂ.ಕೃಷ್ಣೇಗೌಡ ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದು ಬಂದಿದೆ. ಇತ್ತೀಚೆಗಷ್ಟೇ ಅವರು ಕೊರೋನಾ ಸೋಂಕು ತಗುಲಿ, ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಬೈರಸಂದ್ರದಲ್ಲಿ ಜನಿಸಿದ ಕೃಷ್ಣಬೈರೇಗೌಡ ನಟನೆ ಮಾತ್ರವಲ್ಲದೇ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದರು. ಉತ್ತಮ ವಾಲಿಬಾಲ್ ಆಟಗಾರರೂ ಹೌದು. ಸಾಹಸಸಿಂಹ ಡಾ.ವಿಷ್ಣುವರ್ಧನ್, ರೆಬಲ್ ಸ್ಟಾರ್ ಅಂಬರೀಶ್, ರಮೇಶ್ ಅರವಿಂದ್, ಶಿವರಾಜ್ ಕುಮಾರ್ ಮೊದಲಾದ ನಟರ ಜೊತೆ ಅವರ ನಟಿಸಿದ್ದಾರೆ. ಚಿತ್ರರಂಗಕ್ಕೆ ಬರುವ ಮೊದಲು ರಂಗಭೂಮಿಯಲ್ಲಿ ಉತ್ತಮ ಕಲಾವಿದನಾಗಿ ಜನಪ್ರಿಯರಾಗಿದ್ದರು. `ಮುಖ್ಯಮಂತ್ರಿ’ ನಾಟಕದಲ್ಲಿನ ಪಾತ್ರ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತ್ತು. ಕಿರುತೆರೆಯಲ್ಲೂ ಕೃಷ್ಣೇಗೌಡರು ಪಾತ್ರವಾಗಿದ್ದಾರೆ. ಇವರ ಸಾಧನೆಗೆ ರಾಜ್ಯ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಇಂತಹ ಕಲಾವಿದನನ್ನು ಕಳೆದುಕೊಂಡದಕ್ಕಾಗಿ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com