ಕಾಪು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಮಾರ್ಗದರ್ಶನದಲ್ಲಿ
ಸಮಾಜ ಸೇವಾ ವೇದಿಕೆ ಪದಾಧಿಕಾರಗಳಾದ ಮಹಮ್ಮದ್ ಫಾರುಕ್ ಚಂದ್ರನಗರ, ದಿವಾಕರ ಬಿ. ಶೆಟ್ಟಿ ಕಳತ್ತೂರು, ದಿವಾಕರ ಡಿ. ಶೆಟ್ಟಿ ಇವರ ನೇತೃತ್ವದಲ್ಲಿ
ಹೋಂ ಹೌಸೊಲೇಷನ್ ನಲ್ಲಿರುವ ಕೊರೋನ ಸೋಂಕಿತರ ಉಪಯೋಗಕ್ಕಾಗಿ ಸುಮಾರು 40 ಸಾವಿರ ರೂಪಾಯಿ ವೆಚ್ಚದಲ್ಲಿ ಪಲ್ಸ್ ಆಕ್ಸಿಮೀಟರ್ ಡಿಜಿಟಲ್ ಥರ್ಮಮೀಟರ್ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮ ನಡೆಯಿತು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಮುಖಾಂತರ ಸೊರಕೆಯವರು ಕಿಟ್ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಅವರು, ಸಮಾಜ ಸೇವಾ ವೇದಿಕೆ ಕೊರೊನಾ ಆರಂಭಿಕ ಹಂತದಲ್ಲಿ ಅರ್ಹರಿಗೆ 3000 ಕ್ಕೂ ಮಿಕ್ಕಿ ಆಹಾರ ಸಾಮಾಗ್ರಿ ಕಿಟ್ ಗಳನ್ನು ನೀಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶಿರ್ವ ಸಮುದಾಯ ಕೇಂದ್ರಕ್ಕೆ ಅಗತ್ಯವಿರುವ ವೈದ್ಯಕೀಯ ಪರಿಕರಗಳನ್ನು ತನ್ನ ಸ್ವಂತ ಖರ್ಚಿನಿಂದ ನೀಡುವುದಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ ಅಧ್ಯಕ್ಷ ರಾಮರಾಯ ಪಾಟ್ಕರ್, ಶಿರ್ವ ಸ.ಆ.ಕೇ ಮುಖ್ಯಸ್ಥೆ ಡಾ.ಗಾಯತ್ರಿ, ಶಿರ್ವ ಗ್ರಾ.ಪಂ ಉಪಾಧ್ಯಕ್ಷೆ ಗ್ರೇಸಿ ಕಾಡ್ರಸ್, ಸಮಾಜ ಸೇವಾ ವೇದಿಕೆ ಅಧ್ಯಕ್ಷ ಮಹಮ್ಮದ್ ಫಾರುಕ್ ಚಂದ್ರನಗರ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಸರಳ, ಸಮಾಜ ಸೇವಾ ವೇದಿಕೆ ಗೌರವ ಅಧ್ಯಕ್ಷರಾದ ದಿವಾಕರ ಬಿ. ಶೆಟ್ಟಿ ಕಳತ್ತೂರು, ಸಂಚಾಲಕ ದಿವಾಕರ ಡಿ. ಶೆಟ್ಟಿ ಕಳತ್ತೂರ ಮೊದಲಾದವರು ಉಪಸ್ಥಿತರಿದ್ದರು.
Advertisement. Scroll to continue reading.