ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಮುದ್ರಾಡಿ ನಾಟ್ಕದೂರು ಶ್ರೀಆದಿಶಕ್ತಿ ದೇವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದ್ದು ಅಭಿವೃದ್ಧಿ ಕಾರ್ಯಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 10 ಲಕ್ಷ ದೇಣಿಗೆ ನೀಡಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಕಳ ತಾಲೂಕು ಯೋಜನಾಧಿಕಾರಿ ಭಾಸ್ಕರ್ ವಿ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸುಕುಮಾರ ಮೋಹನ್ ಅವರಿಗೆ ಹಸ್ತಾಂತರಿಸಿದರು.
ಚೆಕ್ ಸ್ವೀಕರಿಸಿ ಮಾತನಾಡಿದ ಸುಕುಮಾರ ಮೋಹನ್, ಈ ಹಿಂದೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 5 ಲಕ್ಷ ರೂ. ದೇಣಿಗೆ ನೀಡಿದ್ದರು. ಇದೀಗ ಮತ್ತೆ 5 ಲಕ್ಷ ನೀಡಿದ್ದು, ಒಟ್ಟು ಹತ್ತು ಲಕ್ಷ ರೂ. ನೀಡಿದ್ದಾರೆ ಎಂದರು. ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆದಿಶಕ್ತಿ ದೇವಸ್ಥಾನದ ಧರ್ಮದರ್ಶಿ ಧರ್ಮಯೋಗಿ ಮೋಹನ್ ಸ್ವಾಮೀಜಿ ಕೃತಜ್ಞತೆ ಸಲ್ಲಿಸಿದರು.
Advertisement. Scroll to continue reading.