ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಿಂದ ಕಟಪಾಡಿ ವರೆಗಿನ ಆರು ಕಿಲೋ ಮೀಟರ್ ವ್ಯಾಪ್ತಿಯ ರಸ್ತೆಯ ಪಕ್ಕದಲ್ಲಿ ಈ ಬಾರಿ ಹೊಸದಾಗಿ 1,800 ಹೊಸ ಗಿಡಗಳನ್ನು ನೆಟ್ಟು, ಪೋಷಿಸಲಾಗುವುದು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಸೋಮವಾರ ಉಡುಪಿ ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆಯ ವತಿಯಿಂದ ಕಾಪು ಮುದ್ದಣ್ಣ ನರ್ಸರಿ ಬಳಿ ಸಾಮಾಜಿಕ ಅರಣ್ಯ ಬೆಳೆಸುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆಯ ಕಾಮಗಾರಿಯ ವೇಳೆ ಹೆದ್ದಾರಿಯ ಉದ್ದಗಲದಲ್ಲಿ ಸಾವಿರಾರು ಮರಗಳನ್ನು ಕಡಿಯಲಾಗಿದೆ. ಅದಕ್ಕೆ ಪ್ರತಿಯಾಗಿ ಅರಣ್ಯ ಇಲಾಖೆಯು ಹೊಸ ಮರಗಳನ್ನು ಬೆಳೆಸುವ ಯೋಜನೆ ಹಾಕಿಕೊಂಡಿದೆ. ಅರಣ್ಯ ಇಲಾಖೆಯ ಉಡುಪಿ ವಲಯ ರೇಂಜರ್ ಸುಬ್ರಮಣ್ಯ ಆಚಾರ್ ಮಾತನಾಡಿ, ಕಾಪು ವ್ಯಾಪ್ತಿಯಲ್ಲಿ 1800 ಗಿಡಗಳನ್ನು ನೀಡಲಾಗುತ್ತಿದೆ. ಇವುಗಳನ್ನು ಮೂರು ವರ್ಷಗಳ ಕಾಲ ಪೋಷಿಸುವ ಜವಾಬ್ದಾರಿಯನ್ನು ಅರಣ್ಯ ಇಲಾಖೆ ವಹಿಸಿಕೊಳ್ಳಲಿದೆ ಎಂದರು.
Advertisement. Scroll to continue reading.
ಈ ಸಂದರ್ಭ ಕಾಪು ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗವರ್ನರ್, ಬಿಕ್ಕೋ ಕಂಪೆನಿಯ ಆಡಳಿತ ನಿರ್ದೇಶಕ ಶ್ರೀಧರ ಶೇಣವ, ಕಡಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ ಬಲ್ಲಾಳ್, ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪ್ರವೀಣ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಜೀವನ್ ದಾಸ್ ಶೆಟ್ಟಿ, ಅರಣ್ಯ ರಕ್ಷಕರಾದ ಮಂಜುನಾಥ್, ಜಯರಾಮ ಶೆಟ್ಟಿ, ಅಭಿಲಾಷ್, ಗಣಪತಿ ನಾಯಕ್, ಅಶ್ವಿನ, ಜಾಯ್ ಮೊದಲಾದವರು ಉಪಸ್ಥಿತರಿದ್ದರು .