ಕರಾವಳಿ

ಉಡುಪಿ : ಅನುಮತಿ ಇಲ್ಲದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ; ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕಠಿಣ ಕ್ರಮ : ಡಿಸಿ ಜಗದೀಶ್

0

ಉಡುಪಿ : ಸರ್ಕಾರ ನಮ್ಮ ಜಿಲ್ಲೆಗೆ ನಿರ್ಬಂಧವನ್ನು ಸಡಿಲಮಾಡಿದೆ, ಆದರೆ ನಮ್ಮ ಜಿಲ್ಲೆಯ ಜನರು ನಿರ್ಬಂಧವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಸರ್ಕಾರ ಎಷ್ಟೇ ಹೇಳಿದರೂ ಕೂಡ ಜನರು ಮಾತ್ರ ಕಾರ್ಯಕ್ರಮಗಳನ್ನು ಮಾಡುತ್ತಲೇ ಇದ್ದಾರೆ. ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ೫೦ ಪರ್ಸೆಂಟ್ ಗಿಂತ ಹೆಚ್ಚು ಜನರು ಪ್ರಯಾಣಿಸುವುದು ಕಂಡು ಬಂದಿದೆ ಹಾಗೂ ಅಲ್ಲಲ್ಲಿ ರಾಜಕೀಯ ಪಕ್ಷಗಳ ಕಾರ್ಯಕ್ರಮಗಳು ಕೂಡ ನಡೆಯುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಇದಕ್ಕೆಲ್ಲ ಯಾರೂ ಅನುಮತಿ ನೀಡಿಲ್ಲ.ಇದರಿಂದಾಗಿ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತಿದೆ.ಕಾನೂನು ಎಲ್ಲರಿಗೂ ಒಂದೇ ಆಗಿರವುದರಿಂದ ಎಲ್ಲರೂ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಡಿಸಿ ಜಗದೀಶ್ ಹೇಳಿದ್ದಾರೆ.

ಕಾರ್ಯಕ್ರಮ ಮಾಡಲು ಅನುಮತಿ ನೀಡಿದರೆ ಮಾತ್ರ ಮಾಡಬೇಕೇ ಹೊರತು, ಅನುಮತಿ ಇಲ್ಲದೆ ಕಾರ್ಯಕ್ರಮ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿರುವಂತೆ ಜುಲೈ ತಿಂಗಳ ೭ ತಾರೀಖಿನ ವರೆಗೆ ಯಾವ್ದೇ ಕಾರ್ಯಕ್ರಮಗಳು ನಡೆದಲ್ಲಿ ಅವರ ವಿರುದ್ಧ, ಅವರು ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಕ್ರಮ ಕೈಗೊಳ್ಳುವಂತೆ ಆದೇಶವನ್ನು ಮಾಡಲಾಗಿದೆ ಎಂದರು.

Advertisement. Scroll to continue reading.
Click to comment

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com