ಕರಾವಳಿ

ಕಲ್ಪನಾ ಮಹಲೆ ಕೊಲೆ ಪ್ರಕರಣ; ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದ ಹೈಕೋರ್ಟ್

0

ವರದಿ : ದಿನೇಶ್ ರಾಯಪ್ಪನಮಠ

ಭಟ್ಕಳ: ಸಾಗರ ರಸ್ತೆಯ ಕೋಣಾರ ಗುಡ್ಡದಲ್ಲಿ 2012 ರಲ್ಲಿ ನಡೆದಿದ್ದ ಕಲ್ಪನಾ ಮಹಲೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ಧಾರವಾಡ ಹೈಕೋರ್ಟ್ ಎತ್ತಿ ಹಿಡಿದಿದೆ.

4 ನವೆಂಬರ್ 2012 ರಂದು ಕಲ್ಪನಾ ಮಹಲೆ ಎಂಬ ಮಹಿಳೆಯ ಕೊಲೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕಿನ ಮುಂಡಳ್ಳಿಯ ಸದಾಶಿವ ನಾಗಪ್ಪ ನಾಯ್ಕ ಹಾಗೂ ನಾಗರಾಜ ನಾಯ್ಕ ಎಂಬುವವರನ್ನು ಪೊಲೀಸರು ಬಂಧಿಸಿದ್ದರು.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ನ್ಯಾಯಾಧೀಶ ವಿ. ಎಸ್. ಧಾರವಾಡಕರ್ ಅರೋಪಿ ಗಳನ್ನು ದೋಷಮುಕ್ತಗೊಳಿಸಲು 26 ಮಾರ್ಚ್ 2018 ರಂದು ಆದೇಶ ಹೊರಡಿಸಿದ್ದರು.

Advertisement. Scroll to continue reading.

ಸರಕಾರ ಈ ಪ್ರಕರಣವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿತ್ತು. ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ಜೆ.ಎನ್. ಖಾಜೀ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಸರಕಾರ ಸಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಿ, ಕಾರವಾರದ ಸೆಷನ್ ನ್ಯಾಯಾಧೀಶರು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರದ ವಕೀಲ ರವಿಕಿರಣ ಮುರ್ಡೇಶ್ವರ ಆರೋಪಿಗಳ ಪರವಾಗಿ ವಾದಿಸಿದ್ದರು.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com