ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಮುಖ ಕಂಡುಬಂದ ಹಿನ್ನೆಲೆಯಲ್ಲಿ ಅನ್ ಲಾಕ್ 2.0 ಮಾರ್ಗಸೂಚಿ ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಅನ್ ಲಾಕ್ ಭಾಗ್ಯ ದೊರಕಿದ್ದು,ಸಂಜೆ 5 ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಈ ಕುರಿತು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದು, ಜೂ.30ರವರೆಗಿನ ಪಾಸಿಟಿವ್ ಪ್ರಕರಣಗಳ ದರವನ್ನು ಮೌಲ್ಯಮಾಪನ ಮಾಡಿ ಪಾಸಿಟಿವ್ ದರ ಇಳಿಕೆಯದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆಟಗರಿ-1 ಜಿಲ್ಲೆಗಳೊಂದಿಗೆ ಸೇರ್ಪಡೆಗೊಳಿಸಲು ಆದೇಶಿಸಿದ್ದಾರೆ.
ಅನ್ ಲಾಕ್ ಜಿಲ್ಲೆಗಳಿಗೆ ಅನುಮತಿಸಲಾದ ಎಲ್ಲಾ ಹೆಚ್ಚುವರಿ ಕಾರ್ಯಚಟುವಟಿಕೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ದಿನಾಂಕ ಜು.5ರ ಬೆಳಿಗ್ಗೆ 5 ಗಂಟೆಯವರೆಗೆ ಅನ್ವಯವಾಗುತ್ತವೆ ಎಂದು ಅವರು ಹೇಳಿದ್ದಾರೆ.
Advertisement. Scroll to continue reading.
ಇಂದು ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ3,203 ರಷ್ಟು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 28,47,013ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ ಕೋವಿಡ್ ಗೆ 94ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 35,135ಕ್ಕೆ ಏರಿಕೆಯಾಗಿದೆ.
ಇನ್ನು ಅನ್ ಲಾಕ್ ಘೋಷಣೆ ಮಾಡಿದ್ದರೂ ವಾರಾಂತ್ಯ ಕರ್ಫ್ಯೂ ರಾಜ್ಯದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.
Advertisement. Scroll to continue reading.