ಹಿರಿಯ ಪತ್ರಕರ್ತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಮಾಧ್ಯಮ ಸಮನ್ವಯ ಅಧಿಕಾರಿಯಾಗಿದ್ದ ಕೆ.ಸಿ.ಸದಾನಂದ ತೀವ್ರ ಹೃದಯಾಘಾತದಿಂದ ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ ನಿಧನರಾಗಿದ್ದಾರೆ. ಹೃದಯಾಘಾತಕ್ಕೀಡಾಗಿದ್ದ ಅವರನ್ನು ಕೂಡಲೇ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆ ಉಸಿರೆಳೆದಿದ್ದಾರೆ.
2018ರಲ್ಲಿ ರಾಜ್ಯದ ಸಿಎಂ ಆಗಿದ್ದಾ ಹೆಚ್ಡಿ ಕುಮಾರಸ್ವಾಮಿ ಅವರ ಮಾಧ್ಯಮ ಸಮನ್ವಯ ಅಧಿಕಾರಿಯನ್ನಾಗಿ ಸದಾನಂದ ಅವರನ್ನು ನೇಮಿಸಿದ್ದರು. ಈ ಹಿಂದೆ ಅವರು ಸಂಜೆವಾಣಿ, ಕರ್ನಾಟಕ ಮಲ್ಲ ಪತ್ರಿಕೆಗಳಲ್ಲಿ ಸುದೀರ್ಘ ಕಾಲ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.
ಸದಾನಂದ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
Advertisement. Scroll to continue reading.
ದೀರ್ಘ ಕಾಲದ ನನ್ನ ಒಡನಾಡಿ, ಹಿರಿಯ ಪತ್ರಕರ್ತ, ಮಾಧ್ಯಮ ಕಾರ್ಯದರ್ಶಿಯೂ ಆಗಿದ್ದ ಕೆ.ಸಿ. ಸದಾನಂದ ನಿಧನರಾಗಿದ್ದಾರೆ. ಅವರ ಅಗಲಿಕೆ ನನ್ನನ್ನು ನೋವಿಗೆ ತಳ್ಳಿದೆ. ಎಂಥ ಆಮಿಷಗಳಿಗೂ ಜಗ್ಗದ ಸದಾನಂದ ಕರ್ತವ್ಯನಿಷ್ಠೆ, ಸ್ವಾಮಿನಿಷ್ಠೆಯನ್ನೂ ಪ್ರದರ್ಶಿಸಿದ್ದರು. ಅವರ ಕುಟುಂಬದ ನೋವು ನನ್ನದೂ ಕೂಡ. ನೀವು ನಿರ್ಗಮಿಸಿದರೂ ‘ಸದಾ’ ನೆನಪಲ್ಲಿರುತ್ತೀರಿ ಎಂದು ಟ್ವೀಟ್ ಮಾಡಿದ್ದಾರೆ.