ದೆಹಲಿ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಮಹತ್ವದ ಹುದ್ದೆ ಸಿಕ್ಕಿದೆ.
ಪ್ರಸ್ತುತ ತಮಿಳುನಾಡು ರಾಜ್ಯಾಧ್ಯಕ್ಷರಾಗಿದ್ದ ಎಲ್.ಮುರುಗನ್ ಅವರನ್ನು ಮೀನುಗಾರಿಗೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರಾಗಿ ನೇಮಿಸಲಾಗಿದೆ. ತೆರವಾಗಿದ್ದ ಸ್ಥಾನಕ್ಕೆ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಲಾಗಿದೆ. ಅಣ್ಣಾಮಲೈ ಎಲೆಕ್ಷನ್ ನಲ್ಲಿ ಸೋತಿದ್ದರೂ ಅವರ ವರ್ಚಸ್ಸು , ಜನಪ್ರಿಯತೆ ಉಳಿದಿದ್ದು, ಇದು ಪಕ್ಷ ಕಟ್ಟುವಲ್ಲಿ ಸಹಕಾರಿಯಾಗಬಲ್ಲದು ಎಂಬ ಲೆಕ್ಕಾಚಾರ ಬಿಜೆಪಿಯದು.
Advertisement. Scroll to continue reading.