ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಇತ್ತೀಚೆಗೆ ತುಮಕೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಸಂಚಾಲಕರು, ಕುಂದಾಪುರ ವಲಯದ ಹಿರಿಯ ಛಾಯಾಗ್ರಾಹಕರಾಗಿದ್ದ ಅಶೋಕ್ ಕುಮಾರ್ ಶೆಟ್ಟಿ ಅವರ ಶೃದ್ದಾಂಜಲಿ ಸಭೆಯು ಕುಂದಾಪುರದ ಹರಿಪ್ರಸಾದ್ ಸಭಾಭವನದಲ್ಲಿ ನಡೆಯಿತು.
ದಿ.ಅಶೋಕ್ ಕುಮಾರ್ ಶೆಟ್ಟಿ ಅವರ ಭಾವ ಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸುವ ಮೂಲಕ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಇದರ ಜಿಲ್ಲಾ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್ ಶೃದ್ದಾಂಜಲಿ ಸಭೆಗೆ ಚಾಲನೆ ನೀಡಿದರು.
ಈ ಸಂದರ್ಭ ವಲಯಾಧ್ಯಕ್ಷ ರಾಜಾ ಮಠದಬೆಟ್ಟು, ಜಿಲ್ಲಾ ಉಪಾಧ್ಯಕ್ಷ ನಾಗರಾಜ ರಾಯಪ್ಪನಮಠ, ಸಲಹಾ ಸಮಿತಿ ಅಧ್ಯಕ್ಷ ಗಿರೀಶ್ ಜಿ.ಕೆ, ಸಿ.ಯು.ಎಸ್. ಎಸ್. ಮಂಗಳೂರು ನಿರ್ದೇಶಕ ಗಣೇಶ್ ಬೆನಕ, ಕಾರ್ಯದರ್ಶಿ ಅಮೃತ್ ಬೀಜಾಡಿ, ಖಜಾಂಚಿ ಗೋಪಾಲ್ ಕಾಂಚನ್, ಉಪಾಧ್ಯಕ್ಷರುಗಳಾದ ಸುರೇಶ್ ಹಾಲಾಡಿ, ಪ್ರಕಾಶ್ ಕುಂದೇಶ್ವರ, ಬಾಲಣ್ಣ ಇಡೂರು, ಚಂದ್ರಶೇಖರ್ ಓಂಕಾರ, ಉಡುಪಿ ವಲಯಾಧ್ಯಕ್ಷ ಪ್ರಕಾಶ್, ಜಿಲ್ಲಾ ಸಮಿತಿಯ ಸದಸ್ಯ ಸುಂದರ್ ಉಡುಪಿ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು.
Advertisement. Scroll to continue reading.