ಕರಾವಳಿ

ಬ್ರಹ್ಮಾವರ – ಹೆಬ್ರಿ ರಸ್ತೆ ಅಗಲೀಕರಣದ ವೇಳೆ ಮರಗಳ ತೆರವು; ಬದಲಿ ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಸಚಿವ ಲಿಂಬಾವಳಿ ಚಾಲನೆ

0

ವರದಿ : ಬಿ.ಎಸ್.ಆಚಾರ್ಯ

ಬ್ರಹ್ಮಾವರ : ಬ್ರಹ್ಮಾವರ – ಹೆಬ್ರಿ ರಸ್ತೆ ಅಗಲೀಕರಣ ಮಾಡಲು ರಸ್ತೆ ಬದಿಯಲ್ಲಿದ್ದ ಹಳೆ ಮರಗಳನ್ನು ಕಡಿದ ಕಾರಣ ಒಂದು ಮರಕ್ಕೆ 10 ಹಣ್ಣುಗಳ 3000 ಸಾವಿರ ನಾನಾ ಜಾತಿಯ ಸಸಿಗಳನ್ನು ನೆಡುವ ಕಾರ್ಯಕ್ರಮ ಅರಣ್ಯ ಸಚಿವ ಅರವಿಂದ ಲಿಂಬಾವಳಿಯವರು ಬ್ರಹ್ಮಾವರ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಅವರು, ಒಂದು ಮರ ಕಡಿದುದಕ್ಕೆ 10 ಮರಗಳನ್ನು ನೆಡುವುದರಿಂದ ಮನುಷ್ಯರಿಗೆ ಮತ್ತು ಜೀವ ಸಂಕುಲಕ್ಕೆ ಆಮ್ಲಜನಕದ ಪೂರೈಕೆಯಾಗುತ್ತದೆ. ರಸ್ತೆ ಅಗಲೀಕರಣವಾಗಲಿ ಬೆಳೆಯುವ ನಗರೀಕರಣಕ್ಕೆ ಆಗಲಿ ಕಡಿದ ಮರಗಳ ಬದಲಿಗೆ ಗಿಡ ನೆಡುವುದರೊಂದಿಗೆ ಅದನ್ನು ಪೋಷಿಸುವ ಹೊಣೆಗಾರಿಕೆ ನಮ್ಮ ಜನರಲ್ಲಿ ಬರಬೇಕು. ಬ್ರಹ್ಮಾವರದ ಈ ಕಾರ್ಯಕ್ರಮ ಇತರರಿಗೆ ಮಾದರಿಯಾಗಬೇಕು ಎಂದರು.


ಈ ಸಂದರ್ಭದಲ್ಲಿ ಹಲವಾರು ವರ್ಷದಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿವಪ್ಪ ನಾಯ್ಕ್ ಅವರನ್ನು ಸಚಿವರು ಸನ್ಮಾನಿಸಿದರು.


ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ಚಾಂತಾರು ಗ್ರಾಮ ಪಂಚಾಯತಿ ಅಧ್ಯಕ್ಷೆ ಮೀರಾ ಸದಾನಂದ ಪೂಜಾರಿ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಅರಣ್ಯ ಇಲಾಖೆಯ ಮುಖ್ಯಸ್ಥರಾದ ಮಿಲ್ಲೋ ಟ್ಯಾಗೋ, ಪ್ರಕಾಶ್ ನೆಟಲೇಕರ್, ಆಶಿಶ್ ರೆಡ್ಡಿ, ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ,ಉಪವಲಯ ಅರಣ್ಯಾಧಿಕಾರಿ ಹರೀಶ್ ಇನ್ನಿತರರು ಉಪಸ್ಥಿತರಿದ್ದರು.

Advertisement. Scroll to continue reading.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com