ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ರೈತರನ್ನು ಮಂಗಗಳ ಕಾಟದಿಂದ ರಕ್ಷಿಸಲು ಮಂಕಿ ಪಾರ್ಕ್ ಸ್ಥಾಪಿಸಲು ಶೀಘ್ರವೇ ತಜ್ಞರ ಸಮಿತಿ ರಚಿಸಿ, ಆ ಮೂಲಕ ರೈತರ ಹಲವಾರು ವರ್ಷದ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಅವರು ಶನಿವಾರ ಹೆಬ್ರಿಯಲ್ಲಿ ಅರಣ್ಯ ಇಲಾಖೆಯು ನಿರ್ಮಿಸಿದ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯನವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಾವು ಜನರು ಅರಣ್ಯ ಮತ್ತು ಪ್ರಾಣಿ ಸ್ನೇಹಿಗಳಾಗಿ ಕೆಲಸ ಮಾಡಿ ಅಭಿವೃದ್ದಿಗೆ ಕೈಜೋಡಿಸಬೇಕಿದೆ. ಕಾನೂನಿನ ನೆಪದಲ್ಲಿ ಅಭಿವೃದ್ಧಿಗೆ ಅಡ್ಡಿ ಪಡಿಸಬಾರದು ಎಂದು ಸಚಿವ ಅರವಿಂದ ಲಿಂಬಾವಳಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಹೆಬ್ರಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಜಯಕರ ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಲತಿ, ನಾಡ್ಪಾಲಿನ ದಿನೇಶ ಹೆಗ್ಡೆ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ಮಿಲ್ಲೋ ಟ್ಯಾಗೋ, ಪ್ರಕಾಶ್ ನೆಟಾಲ್ಕರ್, ರುಥ್ರೇನ್, ಡಾ.ಪ್ರಶಾಂತ್ ಪಿಕೆಎಂ, ಹೆಬ್ರಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್, ವಿವಿಧ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಹೆಬ್ರಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಪೂಜಾರಿ ಉಪಸ್ಥಿತರಿದ್ದರು. ಕಬ್ಬಿನಾಲೆ ಸೀತಾರಾಮ ಹೆಬ್ಬಾರ್ ನಿರೂಪಿಸಿ, ಆರ್ಎಫ್ಒ ದಿನೇಶ್ ಕುಮಾರ್ ವಂದಿಸಿದರು.
Advertisement. Scroll to continue reading.