ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗಾನಾಡು ಗ್ರಾಮದ ಹಿಂದುಳಿದ ವರ್ಗದ ಬಡ ಕುಟುಂಬಗಳಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ 100 ರೇಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ಕ್ರಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾದ ವೆಂಕಟ ಪೂಜಾರಿ ಸಸಿಹಿತ್ಲು ಸಾಂಕೇತಿಕವಾಗಿ ವಿತರಣೆ ಮಾಡಿದರು. ಈ ವೇಳೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಇವರಿಗೆ ಶಾಲು ಹೊದಿಸಿ ಗೌರವಿಸಿ, ಕೊರೊನ ಸಮಯದಲ್ಲಿ ಗ್ರಾಮೀಣ ಪ್ರದೇಶದ ಜನರ ಮೇಲೆ ಕಾಳಜಿಯಿಟ್ಟು ಫುಡ್ ನೀಡಿದ ಮಲಬಾರ್ ಗೋಲ್ಡ್ ಸಂಸ್ಥೆಯ ಸಾಮಾಜಿಕ ಕಳಕಳಿ ಹಾಗೂ ಬಡವರಿಗೆ ನೀಡುವ ಸೌಲಭ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಮಯದಲ್ಲಿ ಉಡುಪಿ ಮಲಬಾರ್ ಗೋಲ್ಡ್ ಸಂಸ್ಥೆಯ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ತಸ್ಲಿಮ್, ನದೀಮ್, ದೇವದಾಸ್ ನಾಗೂರು, ಸ್ಥಳೀಯರಾದ ಹೆರಿಯ ದೇವಾಡಿಗ, ಸುಧಾಕರ್ ಮೋಗವೀರ, ಹರೀಶ್ ಜಟ್ಟಿತ್ಲು, ರಾಘವೇಂದ್ರ ಮೋಗವೀರ ಸಸಿಹಿತ್ಲು ಮತ್ತಿತ್ತರರು ಉಪಸ್ಥಿತರಿದ್ದರು.
Advertisement. Scroll to continue reading.