ಮೈಸೂರು : ಲೋನ್ ಹೆಸರಿನಲ್ಲಿ ನಟ ದರ್ಶನ್ ಗೆ ರೂ.25 ಕೋಟಿ ವಂಚನೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರಿನ ಹೆಬ್ಬಾಳ ಠಾಣೆಯಲ್ಲಿ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಅಲ್ಲದೇ ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಹೇಳಿಕೊಂಡು ನಟ ದರ್ಶನ್ ಭೇಟಿಯಾಗಿದ್ದಂತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ನಿಮ್ಮ ಸ್ನೇಹಿತರು 25 ಕೋ.ರೂ. ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದು, ಈ ಬಗ್ಗೆ ಮಾಹಿತಿ ಪಡೆಯಲು ಬಂದಿರುವುದಾಗಿ ಮಹಿಳೆ ದರ್ಶನ್ ಬಳಿ ತಿಳಿಸಿದ್ದಳು ಎನ್ನಲಾಗಿದೆ.
ಈ ಬಗ್ಗೆ ದರ್ಶನ್ ಪರಿಶೀಲನೆ ನಡೆಸಿದಾಗ ಲೋನ್ ಗೆ ಯಾರೂ ಅರ್ಜಿ ಹಾಕಿಲ್ಲ ಎಂಬ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಬ್ಬಾಳ ಠಾಣೆಗೆ ದರ್ಶನ್ ದೂರು ನೀಡಿದ್ದಾರೆ. ಮಹಿಳೆಯನ್ನು ಬಂಧಿಸಲಾಗಿದ್ದು, ಉಮಾಪತಿ ಹೇಳಿದ ಕಾರಣ ದರ್ಶನ್ ಬಳಿ ಬಂದು ಹೀಗೆಲ್ಲಾ ಮಾಡಿರುವುದಾಗಿ ಆಕೆ ವಿಚಾರಣೆ ವೇಳೆ ತಿಳಿಸಿದ್ದಾಳೆ ಎನ್ನಲಾಗಿದೆ. ಉಮಾಪತಿ ಮತ್ತು ದರ್ಶನ್ ಉತ್ತಮ ಸ್ನೇಹಿತರಾಗಿದ್ದರು, ರಾಬರ್ಟ್ ಚಿತ್ರಕ್ಕೆ ಉಮಾಪತಿ ಬಂಡವಾಳ ಹೂಡಿದ್ದರು.
Advertisement. Scroll to continue reading.