ವರದಿ : ದಿನೇಶ್ ರಾಯಪ್ಪನಮಠ
ಕೋಟ: ಕೋಟದಿಂದ ಪಡುಕರೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಒರ್ವನನ್ನು ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ ನೇತ್ರತ್ವದಲ್ಲಿ ಸೆರೆ ಹಿಡಿದ ಘಟನೆ ಸೋಮವಾರ ನಡೆದಿದೆ.
ಕೋಟತಟ್ಟು ಪಡುಕರೆಯ ಆಕಾಶವಾಣಿ ಇಬ್ರಾಹಿಂ ಬಂಧಿತ. ಗಾಂಜಾ ಸ್ಕೂಟಿಯಲ್ಲಿ ಸಾಗಾಟ ಮಾಡುತ್ತಿರುವಾಗ ಕೋಟದ ವರುಣತೀರ್ಥ ಕೆರೆ ಸಮೀಪ ಅಡ್ಡಗಟ್ಟಿ ಆರೋಪಿಯನ್ನು ಸೆರೆಹಿಡಿಯಲಾಗಿದೆ. ಸುಮಾರು 1ಕೆ.ಜಿ 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.
Advertisement. Scroll to continue reading.