ರಾಜ್ಯ

ಮಲೆನಾಡು ಗ್ರಾಮೀಣ ಭಾಗದ ಮಕ್ಕಳ ಸಮಸ್ಯೆ ನಿವಾರಿಸಲು ಕ್ರಮ

0

ಕೊರೊನಾವೈರಸ್ ಜೊತೆ ಜೊತೆಗೆ ಹೊಸ ಹೊಸ ಸಮಸ್ಯೆಗಳು ಶಿಕ್ಷಣ ಕ್ಷೇತ್ರವನ್ನು ಕಾಡುತ್ತಿವೆ. ಸಾಂಪ್ರದಾಯಿಕ ಕಲಿಕಾ ವಿಧಾನಕ್ಕೆ ಕೋವಿಡ್ ತಡಿಯೋಡಿದ್ದು ಆನ್‌ಲೈನ್ ಶಿಕ್ಷಣವೇ ಅನಿವಾರ್ಯವಾಗಿಬಿಟ್ಟಿದೆ. ಇದರಿಂದ ಹಲವಾರು ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗಿದ್ದಾರೆ. ಕೆಲವು ಸಮಯದ ಕಾಲ ಆನ್‌ಲೈನ್ ಶಿಕ್ಷಣ ಮುಂದುವರಿಯಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದರ ನಡುವೆ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಿದೆ.
ಹೀಗಾಗಿ ಈ ಭಾಗದ ಮಕ್ಕಳ ಸಮಸ್ಯೆ ನೀಗಿಸಲು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಂದಾಗಿದ್ದಾರೆ.

ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದು ಮನವಿ ಮಾಡಿದ್ದರು. ಆದರೂ ಗ್ರಾಮೀಣ ಭಾಗದ ಮಕ್ಕಳ ಸಮಸ್ಯೆ ಬಗೆಹರಿಯಲಿಲ್ಲ. ಇದೀಗ ಮತ್ತೊಂದು ಹಂತದ ಪ್ರಯತ್ನವನ್ನು ಸುರೇಶ್ ಕುಮಾರ್ ಮಾಡಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗ ಮುಖ್ಯವಾಗಿ ಮಲೆನಾಡಿನ ಗ್ರಾಮೀಣ ಭಾಗದ ಮಕ್ಕಳ ಸಮಸ್ಯೆ ನೀಗುವ ಸಾಧ್ಯತೆಗಳು ಕಂಡು ಬಂದಿದೆ.

ಮೊಬೈಲ್ ನೆಟ್‌ವರ್ಕ್ ನ ತೀರಾ ಸಮಸ್ಯೆಯಿಂದಾಗಿ ಆನ್‌ಲೈನ್ ಶಿಕ್ಷಣಕ್ಕೆ ಅಡ್ಡಿಯಾಗುತ್ತಿವೆ. ಹೀಗಾಗಿ ಮಕ್ಕಳು ಬೆಟ್ಟ-ಗುಡ್ಡಗಳನ್ನು ಹತ್ತಿ ನೆಟ್‌ವರ್ಕ್ ಹಿಡಿಯಬೇಕಾದ ಸಂಕಷ್ಟ ಎದುರಾಗಿದೆ. ಮಕ್ಕಳ ಭದ್ರತೆಯ ದೃಷ್ಟಿಯಿಂದ ಸುರಕ್ಷಿತವಲ್ಲ ಎಂದು ಪಾಲಕರು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಲೇ ಬಂದಿದ್ದಾರೆ.

Advertisement. Scroll to continue reading.

ಇದನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.ಈಗಾಗಲೇ ಐಟಿ-ಬಿಟಿ ಸಚಿವ ಡಾ. ಅಶ್ವಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್‌ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರು ಚರ್ಚಿಸಿದ್ದಾರೆ. ಕಂಪನಿಗಳ ಮುಖ್ಯಸ್ಥರು ನೆಟ್‌ವರ್ಕ್‌ ಸುಧಾರಿಸುವ ಭರವಸೆ ಕೊಟ್ಟಿದ್ದಾರೆಂದು ತಿಳಿಸಿದ್ದಾರೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com