ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಸಹಾಯಹಸ್ತ ಅಂಕದಕಟ್ಟೆ ಹಾಗೂ ಕಟ್ಟೆ ಫ್ರೆಂಡ್ಸ್ ಅಂಕದಕಟ್ಟೆ ಸಹಯೋಗದಲ್ಲಿ ಕೋಟೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು. ಈ ವೇಳೆ 12 ಜನ ಆಶಾಕಾರ್ಯಕರ್ತೆಯರನ್ನು ತಲಾ ಎರಡು ಸಾವಿರ ರೂಪಾಯಿ ಗೌರವ ಧನ ಹಾಗೂ ತಲಾ ಒಂದೊಂದು ಕೊಡೆ ನೀಡುವುದರ ಮೂಲಕ ಅವರ ಸೇವೆಯನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ, ಉಪಾಧ್ಯಕ್ಷೆ ರಾಗಿಣಿ ದೇವಾಡಿಗ, ಪಂಚಾಯತ್ ಸದಸ್ಯರಾದ ಲೋಕೇಶ್ ಅಂಕದಕಟ್ಟೆ, ಮಹಿಳಾ ಸ್ವಸಹಾಯ ಸಂಘ ಕೋಟೇಶ್ವರ ಒಕ್ಕೂಟದ ಉಪಾಧ್ಯಕ್ಷೆ ಜಯಲಕ್ಷ್ಮೀ ಗಾಣಿಗ, ಸ್ಥಳೀಯ ಪ್ರಮುಖರಾದ ಲಲಿತ ದೇವಾಡಿಗ ಹಾಗೂ ಸಹಾಯ ಹಸ್ತ ಮತ್ತು ಕಟ್ಟೆ ಫ್ರೆಂಡ್ಸ್ ಅಂಕದಕಟ್ಟೆಯ ಸದಸ್ಯರು ಉಪಸ್ಥಿತರಿದ್ದರು. ಅಭಿಷೇಕ ಅಂಕದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
Advertisement. Scroll to continue reading.