ರಾಜ್ಯ

ಬಕ್ರೀದ್ ಆಚರಣೆಗೆ ರಾಜ್ಯ ಸರಕಾರದಿಂದ ಮಾರ್ಗಸೂಚಿ ಪ್ರಕಟ

0

ಬೆಂಗಳೂರು : ಜುಲೈ.21ರಂದು ಬಕ್ರೀದ್ ಹಬ್ಬದ ಆಚರಣೆಗೆ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ. ಈ ಕ್ರಮದಂತೆ ಈದ್ಗಾ ಮೈದಾನಗಳಲ್ಲಿನ ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್ ಹಾಕಿದ್ದು, ಮಸೀದಿಗಳಲ್ಲಿ 50 ಜನರಿಗೆ ಮಾತ್ರ ಪ್ರಾರ್ಥನೆ ಸಲ್ಲಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತು ಅಲ್ವಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮುಕ್ತಾರ್ ಪಾಷ.ಹೆಚ್.ಜಿ ನಡವಳಿಗಳನ್ನು ಹೊರಡಿಸಿದ್ದು, ಮುಸ್ಲಿಂ ಬಾಂಧವರ ಪ್ರಮುಖ ಹಬ್ಬಗಳಲ್ಲಿ ಬಕ್ರೀದ್ ಕೂಡ ಒಂದು 2021ನೇ ಸಾಲಿನ ಬಕ್ರೀದ್ ಹಬ್ಬವನ್ನು ಜುಲೈ 21ನೇ ತಾರೀಕಿನಂದು ಆಚರಿಸಲಾಗುವುದೆಂದು ರಾಜ್ಯದ ಹಿಲಾಲ್ ಸಮಿತಿ ಘೋಷಿಸಿರುತ್ತದೆ.

ರಾಜ್ಯದೆಲ್ಲೆಡೆ ಕೋವಿಡ್-19 ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯತೆಯಿರುತ್ತದೆ. ಹಾಗಾಗಿ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಮಾಸ್ಕ್ ಕಡ್ಡಾಯವಾಗಿದ್ದು, 65 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷದೊಳಗಿನ ಮಕ್ಕಳು ಮಸೀದಿಗೆ ತೆರಳಬಾರದು. ನಮಾಝ್ ನಿರ್ವಹಿಸುವವರ ಮಧ್ಯೆ ಕನಿಷ್ಠ 6 ಅಡಿ ಅಂತರ ಇರಬೇಕು. ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ. ಮಸೀದಿ ಪ್ರವೇಶಿಸುವವರಿಗೆ ದೇಹದ ತಾಪಮಾನ ಪರೀಕ್ಷಿಸಬೇಕು. ಸೋಪ್ ಅಥವಾ ಸ್ಯಾನಿಟೈಸರ್ ಮೂಲಕ ಕೈಗಳನ್ನು ಸ್ವಚ್ಛಗೊಳಿಸಬೇಕು. ಮನೆಯಿಂದಲೇ ಮುಸಲ್ಲಾವನ್ನು ಕೊಂಡೊಯ್ಯಬೇಕು.

Advertisement. Scroll to continue reading.

ರಸ್ತೆಗಳು, ಪಾದಾಚಾರಿ ಮಾರ್ಗಗಳು, ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಮ್ ಒಳ ಮತ್ತು ಹೊರ ಆವರಣಗಳು, ಶಾಲೆ, ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿದ್ದಲ್ಲಿ, ಅಂತಹ ಶಾಕಾ ಕಾಲೇಜುಗಳ ಒಳ ಮತ್ತು ಹೊರ ಆವರಣದಲ್ಲಿ, ಆಟದ ಮೈದಾನಗಳಲ್ಲಿ, ಮಸೀದಿ ಮತ್ತು ಧಾರ್ಮಿಕ ಸ್ಥಳ, ಆವರಣಗಳಲ್ಲಿ, ಉದ್ಯಾನಗಳ ಒಳಗೆ ಮತ್ತು ಹೊರಗೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿವಧೆ ಮತ್ತು ಬಲಿದಾನ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ.

Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com