ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶುಭಾಶಯ ತಿಳಿಸಿದ್ದಾರೆ.
ಬೊಮ್ಮಾಯಿಯವರು ಶಾಸಕಾಂಗ ಮತ್ತು ಆಡಳಿತಾತ್ಮಕ ದೃಷ್ಠಿಯಿಂದ ಅನುಭವ ತಮ್ಮೊಂದಿಗೆ ತರುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಸಾಧಾರಣವಾಗಿ ಕೆಲಸ ಮಾಡಲಿದ್ದಾರೆ ಎಂಬ ವಿಶ್ವಾಸ ಇದೆ ಎಂದು ಟ್ವೀಟ್ ಮೂಲಕ ಶುಭಾಶಯ ತಿಳಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ಕೊಡುಗೆ ಅಪಾರ. ಪಕ್ಷದ ಕಡೆ ಮತ್ತು ಕರ್ನಾಟಕದ ಬೆಳವಣಿಗೆಯ ಹಲವಾರು ದಶಕಗಳ ಕಾಲ ಅವರು ಶ್ರಮಿಸಿದ್ದಾರೆ. ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಪ್ರಯಾಣಿಸಿದ್ದರು. ಜನರೊಂದಿಗೆ ಜನನಾಯಕರಾಗಿ ಕೆಲಸ ಮಾಡಿದರು. ಸಾಮಾಜಿಕ ಕಲ್ಯಾಣದ ಬದ್ಧತೆಗಾಗಿ ಅವರು ಮೆಚ್ಚುಗೆ ಪಡೆದರು ಎಂಬುದಾಗಿ ತಿಳಿಸಿದ್ದಾರೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Advertisement. Scroll to continue reading.