ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ: ವಿಶ್ವಕರ್ಮ ಸಮುದಾಯ ಮುಖಂಡ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಉಡುಪಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಕುಂದಾಪುರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ವಿಶ್ವಕರ್ಮ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ನಾಯಕರಾಗಿಯೂ ಹೊರಹೊಮ್ಮುತ್ತಿರುವ ಕೆ.ಪಿ.ನಂಜುಂಡಿಯವರಿಗೆ ಅವರ ಅರ್ಹತೆ, ಪಕ್ಷ ಮತ್ತು ಸಮಾಜಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ವಿಶೇಷ ಆದ್ಯತೆಯ ನೆಲೆಯಲ್ಲಿ ಸಚಿವ ಸ್ಥಾನವನ್ನು ನೀಡುವಂತೆ ಮನವಿ ಮಾಡಲಾಯಿತು.
Advertisement. Scroll to continue reading.
ಈ ಸಂದರ್ಭ ಉಡುಪಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ರಮೇಶ ಆಚಾರ್ಯ ನೇರಂಬಳ್ಳಿ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಗೌರವಾಧ್ಯಕ್ಷ ಗಂಗಾಧರ ಆಚಾರ್ಯ, ಯುವ ಘಟಕದ ಅಧ್ಯಕ್ಷ ರಾಮಕೃಷ್ಣ ಆಚಾರ್, ಪ್ರಮುಖರಾದ ಪ್ರಬಾಕರ್, ರುಕ್ಮಿಣಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು