Connect with us

Hi, what are you looking for?

Diksoochi News

ರಾಜ್ಯ

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

0

ಬೆಂಗಳೂರು : ಬಸವರಾಜ ಬೊಮ್ಮಾಯಿ ಸಿಎಂ ಹುದ್ದೆಗೇರುತ್ತಿದ್ದಂತೆ 5 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ. ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

­ಡಾ.ರಾಮಣ ರೆಡ್ಡಿ.ಇ.ವಿ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ್ದಾರೆ. ಹೆಚ್ಚುವರಿ ಹುದ್ದೆಯಾಗಿ ಇನ್ಫರ್ಮೇಷನ್ ಟೆಕ್ನಾಲಜಿ ಹಾಗೂ ವಯೋ ಟೆಕ್ನಾಲಜಿ ಡಿಪಾರ್ಟ್ ಮೆಂಟ್ ನ ಹೊಣೆಗಾರಿಕೆ ವಹಿಸಲಾಗಿದೆ.

ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಗ್ರಿಕಲ್ಚರಲ್ ಡಿಪಾರ್ಟ್ಮೆಂಟ್ ಗೆ ವರ್ಗಾವಣೆ ಮಾಡಿದ್ದಾರೆ.

Advertisement. Scroll to continue reading.

ಇನ್ನೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಜಾವೇದ್ ಅಖ್ಯರ್ ಅವರನ್ನು ವರ್ಗಾವಣೆ ಮಾಡಿ, ಫಾರೆಸ್ಟ್, ಎಕೋಲಜಿ ಮತ್ತು ಎನ್ವಿರಾರ್ನಮೆಂಟ್ ಡಿಪಾರ್ಮೆಂಟ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ವರ್ಗಾವಣೆ ಮಾಡಿದ್ದಾರೆ.

ಐಎಎಸ್ ಅಧಿಕಾರಿ ತುಷಾರ್ ಗಿರೀಶ್ ಅವರನ್ನು ಕೋ ಆಪರೇಟಿವ್ ಡಿಪಾರ್ಟ್ ಮೆಂಟ್ ನ ಪ್ರಿನ್ಸಿಪಲ್ ಸೆಕ್ರೇಟರಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ಇಲಾಖೆಯಿಂದ ವರ್ಗಾವಣೆ ಮಾಡಿ, ಮುಖ್ಯಮಂತ್ರಿಗಳ ಚೀಫ್ ಸೆಕ್ರೇಟರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದಲ್ಲದೇ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!