ರಾಜ್ಯ ಸರ್ಕಾರ ನೂತನ ಸಂಪುಟ ರಚನೆಯಲ್ಲಿ ಕರಾವಳಿ 3 ಜನರಿಗೆ ಮಂತ್ರಿ ಸ್ಥಾನ ದೊರಕಿದ್ದು ಇವರುಗಳಲ್ಲಿ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ಕೂಡ ಒಬ್ಬರು. ಈ ಬಾರಿಯ ಬೊಮ್ಮಾಯಿ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿದ್ದು ಕರಾವಳಿ ಗರಿಗೆ ಸಂತಸ ತಂದಿದೆ.
ಸದ್ಯ ಮಂತ್ರಿ ಮಂಡಲಕ್ಕೆ ಆಯ್ಕೆ ಬೆನ್ನಲ್ಲೇ ಅಭಿಮಾನಿಗಳಲ್ಲಿ ಮನವಿಯೊಂದು ಮಾಡಿಕೊಂಡಿದ್ದಾರೆ. ತಮ್ಮನು ಅಭಿನಂದಿಸಲು ಹಾರ ತುರಾಯಿ ತರಬೇಡಿ..ಕೊಡಲೇಬೇಕು ಅಂದಿದ್ದರೆ ಒಂದು ಕನ್ನಡ ಪುಸ್ತಕಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ” ಎಂದು ಹೇಳಿದ್ದಾರೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ ತಮ್ಮನ್ನು ನೋಡಲು ಬರುವವರು ಹಾರ ತುರಾಯಿ ತರಬಾರದೆಂದು ಜನರಲ್ಲಿ ಮನವಿ ಮಾಡಿದ್ದರು. ಇದೀಗ ಬಿಜೆಪಿ ಶಾಸಕ ಸುನಿಲ್ ಕುಮಾರ್ ಇವರ ಈ ನಡೆಗೆ ಜನರ ಮೆಚ್ಚುಗೆಗೆ ವ್ಯಕ್ತಪಡಿಸಿದ್ದಾರೆ.
Advertisement. Scroll to continue reading.
