ವರದಿ : ಬಿ.ಎಸ್.ಆಚಾರ್ಯ
ಬೆಂಗಳೂರಿನಲ್ಲಿ ಚಾತುರ್ಮಾಸ ದಲ್ಲಿರುವ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರ ದರ್ಶನವನ್ನ ಗೋವಿಗಾಗಿ ಮೇವು ತಂಡದ ಪ್ರಮುಖರು ಮಾಡಿದರು. ಈ ಸಂದರ್ಭದಲ್ಲಿ ಶ್ರೀಗಳು ಆಶೀರ್ವದಿಸಿ ಗೋವಿಗಾಗಿ ಮೇವು ಅಭಿಯಾನ ರಾಜ್ಯಾದ್ಯಂತ ಬೆಳೆಯಲಿ. ಹಾಗೆಯೇ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಲಿ ಎಂದು ಕರೆ ನೀಡಿದರು. ಗೋವಿಗಾಗಿ ಮೇವು ಅಭಿಯಾನದ ಸ್ಥಾಪಕ ಸಂಚಾಲಕರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನಾಗೇಂದ್ರ ಪ್ರತ್ರನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Advertisement. Scroll to continue reading.