ಬೆಂಗಳೂರು : ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆಯ ಮುಂದೆ ನಿಲ್ಲಿಸಿದ್ದಂತ 2 ಕಾರುಗಳಿಗೆ ದುಷ್ಕರ್ಮಿಗಳು, ಕಳೆದ ರಾತ್ರಿ ಬೆಂಕಿ ಹಚ್ಚಿದ್ದಾರೆ. ಈ ಪ್ರಕರಣ ಸಂಬಂಧಪಟ್ಟಂತೆ, ಶಾಸಕ ಸತೀಶ್ ರೆಡ್ಡಿ ಮನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಿನ್ನೆ ರಾತ್ರಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದಂತಹ 2 ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಬೊಮ್ಮನಹಳ್ಳಿ, ಸುದ್ದಗುಂಟೆ ಪಾಳ್ಯ, ತಿಲಕ್ ನಗರ ಮೂರು ಠಾಣೆಗಳ ಇನ್ಸ್ ಪೆಕ್ಟರ್ ಗಳು ತನಿಖೆಯನ್ನು ನಡೆಸುತ್ತಿದ್ದಾರೆ.
Advertisement. Scroll to continue reading.