ಬೆಂಗಳೂರು : ಆಗಸ್ಟ್ 23 ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಶಾಲೆಗಳ ಆರಂಭಕ್ಕಾಗಿ ಈಗಾಗಲೇ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ.ಮಕ್ಕಳು ಭಯಪಡದೇ ಬನ್ನಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿವಿಧ ತಜ್ಞರ ಜೊತೆಗೆ ಚರ್ಚಿಸಿದ ನಂತರವೇ ಶಾಲೆಗಳನ್ನು ಆರಂಭಿಸಲಾಗುವುದು. ಈಗಾಗಲೇ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಯಾವ ರೀತಿ ಆರಂಭಿಸಬೇಕೆಂಬ ಬಗ್ಗೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಜೊತೆಗೆ ಚರ್ಚಿಸಿದ್ದು, ಎಲ್ಲ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆರಂಭಿಸಲಾಗುತ್ತಿದೆ ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯದಲ್ಲೇ ಆರಂಭಗೊಳ್ಳುತ್ತಿರುವಂತ ಶಾಲೆಗಳಿಗೆ ಭಯಪಡದೇ ಬನ್ನಿ ಮಕ್ಕಳೇ ಎಂದು ಸಿಎಂ ಪ್ರೀತಿಯಿಂದ ಆಹ್ವಾನಿಸಿದ್ದಾರೆ.
Advertisement. Scroll to continue reading.
