Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಸ್ನಾನಕ್ಕೆಂದು ಹೊಳೆಗೆ ಇಳಿದಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

0

ಕುಂದಾಪುರ: ಹೊಳೆಯಲ್ಲಿ ಸ್ನಾನ ಮಾಡಲೆಂದು ನೀರಿಗೆ ಇಳಿದ ಯುವಕರಿಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆರ್ಡಿ ಗ್ರಾಮದ ಗಂಟುಬೀಳುವಿನಲ್ಲಿ ಸೋಮವಾರ ಸಂಜೆ ನಡೆದಿದೆ. ಅಲ್ಬಾಡಿ ಗ್ರಾಮದ ನಿವಾಸಿಗಳಾದ ದಿ| ಕಾಳ ನಾಯ್ಕ್ ಅವರ ಪುತ್ರ ಮೋಹನ ನಾಯ್ಕ್ (22) ಹಾಗೂ ಮಹಾಬಲ ನಾಯ್ಕ್ ಅವರ ಪುತ್ರ ಸುರೇಶ (19) ಸಾವನ್ನಪ್ಪಿದ ದುರ್ದೈವಿಗಳು.

ಅಲ್ಬಾಡಿಯ ನಿವಾಸಿಗಳಾದ ಮೋಹನ್ ಹಾಗೂ ಸುರೇಶ್ ನಾಯ್ಕ್ ಅವರೊಂದಿಗೆ ಗಾರೆ ಕೆಲಸಕ್ಕೆ ಆರ್ಡಿ ಗ್ರಾಮದಿಂದ ಸುಮಾರು 3 ಕಿ.ಮೀ. ಒಳಗಿರುವ ಗಂಟುಬೀಳು ಎಂಬಲ್ಲಿರುವ ಮನೆಯೊಂದಕ್ಕೆ ಕೆಲಸಕ್ಕೆಂದು ಹೋಗಿದ್ದು, ಸೋಮವಾರ ಮಧ್ಯಾಹ್ನ ಸುಮಾರು 1.30 ರ ಸುಮಾರಿಗೆ ಕೆಲಸ ಮುಗಿಸಿ, ಊಟಕ್ಕೂ ಮುನ್ನ ಆ ಮನೆಯ ಸಮೀಪವೇ ಇದ್ದ ಹೊಳೆಗೆ ಯುವಕರಿಬ್ಬರು ಸ್ನಾನಕ್ಕೆಂದು ಇಳಿದಿದ್ದಾರೆ.

ಹೊಳೆ ಸುಮಾರು 15 ಅಡಿ ಆಳವಿದ್ದಿತ್ತೆಂದು ಹೇಳಲಾಗಿದ್ದು, ಹೊಳೆಗೆ ಇಳಿದ ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆದರೆ ಒಬ್ಬರು ಮುಳುಗುತ್ತಿದ್ದವರನ್ನು ರಕ್ಷಿಸಲು ಹೋಗಿ ಸಾವನ್ನಪ್ಪಿದ್ದಾರೆಯೇ ಅಥವಾ ಇಬ್ಬರು ಒಟ್ಟಿಗೆ ಮುಳುಗಿರಬಹುದೇ ಎನ್ನುವ ಕುರಿತು ಖಚಿತ ಮಾಹಿತಿ ಇಲ್ಲ. ಸ್ಥಳೀಯರೆಲ್ಲ ಇವರಿಗಾಗಿ ಹೊಳೆಯಲ್ಲಿ ಹುಡುಕಾಟ ನಡೆಸಿದ್ದು, ಎಲ್ಲರ ಸಹಾಯದಿಂದ ಸಂಜೆ 6.30ರ ಸುಮಾರಿಗೆ ಇಬ್ಬರ ಮೃತದೇಹವನ್ನು ಹೊಳೆಯಿಂದ ಮೇಲಕ್ಕೆತ್ತಲಾಗಿದೆ.

Advertisement. Scroll to continue reading.

ಘಟನಾ ಸ್ಥಳಕ್ಕೆ ಶಂಕರನಾರಾಯಣ ಎಸ್‌ಐ ಶ್ರೀಧರ ನಾಯ್ಕ್, ಪೊಲೀಸ್ ಸಿಬ್ಬಂದಿ, ಬೆಳ್ವೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಸೂರ್ಗೋಳಿ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ದಿನೇಶ್ ರಾಯಪ್ಪನಮಠ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!