Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾರಾಯಣ ಗುರು ಜಯಂತಿ ಆಚರಣೆ

0

ವರದಿ: ಶ್ರೀದತ್ತ ಹೆಬ್ರಿ

ಹೆಬ್ರಿ : ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಹೆಬ್ರಿಯ ಚೈತನ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಮಾತನಾಡಿ, ರಾಷ್ಟ್ರದ ಶ್ರೇಷ್ಠ ಗುರುಗಳಲ್ಲೊಬ್ಬರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗುರುಗಳ ಸಂದೇಶ ಕಾಂಗ್ರೆಸ್ ಪಕ್ಷಕ್ಕೆ ಪ್ರಸ್ತುತವಾಗಿದೆ. ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು, ನಾವೆಲ್ಲರೂ ಸಮಾನ ಎಂಬ ಭಾವನೆ ಇರಬೇಕು ಎಂದು ಹೇಳಿದರು.


ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು. ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಜಿಲ್ಲಾ ಸೇವಾದಳದ ಅಧ್ಯಕ್ಷ ಕಿಶೋರ್ ಕುಮಾರ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ , ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ , NSUI ಅಧ್ಯಕ್ಷ ಸೌರಭ್ ಬಲ್ಲಾಳ್ , ಇಂಟೆಕ್ ನ ಅಧ್ಯಕ್ಷ ಡೆರಿಕ್ ಡಿಸೋಜ, ಜಿಲ್ಲಾ ಪಂಚಾಯತ್ ರಾಜ್ ಅಧ್ಯಕ್ಷೆ ರೋಶನಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರಂಜನಿ ಹೆಬ್ಬಾರ್ , ಯುವ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಶೆಟ್ಟಿ ಹಾಗೂ ಪಕ್ಷದ ವಿವಿಧ ಜಿಲ್ಲಾ ಪ್ರಮುಖರು ಗ್ರಾಮೀಣ ಅಧ್ಯಕ್ಷರು ಜನಪ್ರತಿನಿಧಿಗಳು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!