Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಪ್ರೇಯಸಿಗೆ ಚೂರಿ ಇರಿದು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

0

ವರದಿ : ದಿನೇಶ್ ರಾಯಪ್ಪನಮಠ

ಉಡುಪಿ: ಪ್ರೇಯಸಿಗೆ ಚೂರಿ ಇರಿದು ಬಳಿಕ ತಾನೂ ಕೂಡ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.

ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಮೃತ ಯುವಕ.

Advertisement. Scroll to continue reading.

ಮೃತ ಯುವಕ ಸಂದೇಶ್‌ ಕುಲಾಲ್‌ ಮತ್ತು ಅಂಬಾಗಿಲು ಸಮೀಪದ ಸೌಮಶ್ರೀ ಭಂಡಾರಿ ಪರಸ್ಪರ ಕಳೆದ ಏಳೆಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ಸೌಮ್ಯಶ್ರೀಗೆ ಬೇರೆಯವರೊಂದಿಗೆ ನಿಶ್ಚಿತಾರ್ಥ ಆಗಿತ್ತೆಂದು ತಿಳಿದುಬಂದಿದೆ. ಇದರಿಂದ ಸಂದೇಶ ಕುಲಾಲ್ ಕುಪಿತಗೊಂಡಿದ್ದು, ಇದೇ ವಿಚಾರದಲ್ಲಿ ಇಬ್ಬರಿಗೂ ಜಗಳ ಆಗುತ್ತಿತ್ತು ಎನ್ನಲಾಗಿದೆ.

ಬ್ಯಾಂಕಿನಿಂದ ಆಕೆ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭ ಯುವಕ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಅಡ್ಡಗಟ್ಟಿ, ಯುವತಿಯ ಜೊತೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಜಗಳ ಮುಂದುವರೆದು ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ದ್ವಿಚಕ್ರವಾಹನದಿಂದ ಯುವತಿ ಕೆಳಗೆ ಬಿದ್ದಿದ್ದು, ನಂತರ ಅದೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಸ್ಥಳೀಯರು ಘಟನೆಯನ್ನು ತಪ್ಪಿಸಲು ಯತ್ನಿಸಿದ್ದು ಅಷ್ಟರಲ್ಲೇ ಇಬ್ಬರೂ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಯುವತಿ ಹಾಗೂ ಯುವಕ ಸಂದೇಶ್‌ ಕುಲಾಲ್‌ ನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿಸಲಾಗಿತ್ತಾದರೂ ಯುವತಿ ಅತೀವ ರಕ್ತಸ್ರಾವದಿಂದ ಸೋಮವಾರ ರಾತ್ರಿ ಮೃತಪಟ್ಟಿದ್ದು, ಯುವಕ ಸಂದೇಶ್‌ ಕುಲಾಲ್‌ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್‌ ತಿಳಿಸಿದ್ದಾರೆ.

ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!