ಬ್ರಹ್ಮಾವರ : ಬಾರಕೂರು ಹನೆಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿರುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ರಾಜ್ಯಸರಕಾರದ ಕಾರ್ಮಿಕ ಇಲಾಖೆಯಲ್ಲಿ ನೊಂದಾವಣೆ ಆದ 300 ಕಾರ್ಮಿಕ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಮಂಗಳವಾರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭ ಗ್ರಾಮ ಪಂಚಾಯತಿ ಅಧ್ಯಕ್ಷ ಚಂದ್ರ ಶೇಖರ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರ ಶ್ರಮಿಕ ವರ್ಗದವರನ್ನು ಗುರುತಿಸಿ ಆಹಾರ ಧಾನ್ಯ ನೀಡುತ್ತಿರುವುದು ಉತ್ತಮ ಕೆಲಸವಾಗಿದೆ. ಕೊರೋನಾ ಸಮಯದಲ್ಲಿ ಆಹಾರದ ಕೊರತೆ ನೀಗಿಸುವಲ್ಲಿ ಸ್ವಲ್ಪ ಮಟ್ಟಿನ ನೆರವನ್ನು ಗ್ರಾಮ ಪಂಚಾಯತಿ ಮೂಲಕ ಜನರಿಗೆ ತಲುಪಿಸುವ ಕಾರ್ಯ ವಾಗಿದೆ ಎಂದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅರುಂಧತಿ ಏಸುಮನೆ, ಕಾರ್ಯದರ್ಶಿ ಉಮೇಶ್ ಕಲ್ಯಾಣಪುರ ಮತ್ತು ಗ್ರಾಮ ಪಂಚಾಯತಿಯ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, hanehalli panchayath

Click to comment