ಉತ್ತರ ಕನ್ನಡ : ಸಮುದ್ರದ ದಡದ ಬಂಡೆ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೋಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಾವನ್ನಪ್ಪಿರುವ ಘಟನೆ ಕುಮಟಾದ ವನ್ನಳ್ಳಿ ಬೀಚ್ ನಲ್ಲಿ ನಡೆದಿದೆ.
ಶಿರಸಿ ನಗರದ ನಿವಾಸಿ ಸುಬ್ಬುಗೌಡ(42) ಮೃತ ಪಟ್ಟವರು. ಸ್ನೇಹಿತರ ಜೊತೆಗೆ ಪ್ರವಾಸಿಗೆಂದು ಜೊತೆಗೆ ಬಂದಿದ್ದ ಸುಬ್ಬುಗೌಡ, ಕಡಲತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದ. ಈ ವೇಳೆ ಅಪ್ಪಳಿಸಿದ ಬೃಹತ್ ಗಾತ್ರದ ಅಲೆಯಿಂದ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.